Publish Date: Wed, 08 Feb 2023 (13:39 IST)
Updated Date: Wed, 08 Feb 2023 (13:49 IST)
ರೈತರ ಸಾಲ ಮನ್ನಾ ಮಾಡಬಾರದು ಎಂಬ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸುತ್ತಿದ್ದಾರೆ
ಯೂತ್ ಕಾಂಗ್ರೆಸ್ ಕಾರ್ಯಕರ್ತರಿಂದ ಕಾಂಗ್ರೆಸ್ ಭವನದ ಎದುರು ಧರಣಿ ನಡೆಸುವ ಮೂಲಕ ತೇಜಸ್ವಿ ಸೂರ್ಯ ಗಡಿಪಾರು ಮಾಡುವಂತೆ ಘೋಷಣೆ ಕೂಗುವ ಮೂಲಕ ಅಸಾಮಾಧಾನ ಹೊರಹಾಕಿದ್ದಾರೆ.
ಇನ್ನೂ ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ಮನೋಹರ್ ರೈತ ವಿರೋಧಿ ಸಂಸದ,ಯುಪಿ ಸರ್ಕಾರ ಅವಧಿಯಲ್ಲಿ ರೈತರ ಸಾಲ ಮನ್ನಾ ಆಗಿತ್ತು.ಆದ್ರೆ ಈಗ ಅದಾನಿ ಲಕ್ಷಾಂತರ ಕೋಟಿ ಲೂಟಿ ಮಾಡ್ತಿದ್ದಾರೆ.ರೈತರ ಸಾಲ ಮನ್ನಾ ಮಾಡಬಾರದು, ಅದಾನಿ ಸಾಲ ಮನ್ನಾ ಮಾಡಬೇಕಾ..?ತೇಜಸ್ವಿಯನ್ನ ಲೋಕಸಭೆ ಸದಸ್ಯತ್ವದಿಂದ ಅಮಾನತು ಮಾಡಬೇಕು ಎಂದು ಯೂತ್ ಕಾಂಗ್ರೆಸ್ ಮುಖಂಡ ಮನೋಹರ್ ಆಗ್ರಹಿಸಿದ್ದಾರೆ.