Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಪ್ರಶ್ನೆಗಳ ಸುರಿಮಳೆ ಸುರಿಮಳೆಗೈದಿದೆ.ಬೆಂಗಳೂರಿನ ರಸ್ತೆಗಳಲ್ಲಿ ಓಡಾಡಿದರೆ
ಮಂಗಳ ಗ್ರಹದಲ್ಲಿ ಸಂಚರಿಸಿದ ಅನುಭವ ಪಡೆಯಬಹುದು.ಜನತೆ ಜೀವ ಕೈಯಲ್ಲಿ ಹಿಡಿದು ರಸ್ತೆಗೆ ಇಳಿಯಬೇಕಾದ ಸ್ಥಿತಿ ಇದೆ.ವೇದಿಕೆ ಮೇಲೆ ದಮ್ಮು ತಾಕತ್ತಿನ ಸವಾಲು ಹಾಕುವ ಸಿಎಂ ಬೊಮ್ಮಾಯಿ ಅವರೇ,ರಸ್ತೆ ಗುಂಡಿ ಮುಚ್ಚುವಲ್ಲಿ ತಾವು ದಮ್ಮು ತಾಕತ್ತು ತೋರಬೇಕಲ್ಲವೇ?ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲು ಸರ್ಕಾರ ಮುಂದಾಗಿದೆ.ಈಗಾಗಲೇ ಹೂಡಿಕೆ ಮಾಡಿದವರ ಕೊಡುತ್ತಿರುವ ಉಡುಗೊರೆ - ರಸ್ತೆ ಗುಂಡಿಗಳು.ಪೀಣ್ಯದಲ್ಲಿರುವ ರಸ್ತೆ ಗುಂಡಿಗಳಿಂದ ವಹಿವಾಟಿಗೆ ತೊಂದರೆಯಾಗುತ್ತಿದೆ, ಆರ್ಥಿಕತೆಗೆ ಪೆಟ್ಟು ಬೀಳುತ್ತಿದೆ.ಸಿಎಂ ಬೊಮ್ಮಾಯಿ ಅವರೇ, ಇದೇನಾ ತಾವು ಹೂಡಿಕೆದಾರರಿಗೆ ನೀಡುವ ಭರವಸೆ, ಸೌಲಭ್ಯಗಳು?ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ.