Webdunia - Bharat's app for daily news and videos

Install App

ಮುಂದುವರಿದ ತಾಪಮಾನ: ವೇತನ ಸಹಿತ ಅರ್ಧ ದಿನ ರಜೆಗೆ ಪೌರಕಾರ್ಮಿಕರ ಆಗ್ರಹ

Sampriya
ಮಂಗಳವಾರ, 9 ಏಪ್ರಿಲ್ 2024 (15:46 IST)
ಬೆಂಗಳೂರು: ನಗರದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರುತ್ತಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬಿಸಿಗಾಳಿಯ ಮುನ್ಸೂಚನೆ ನೀಡಿದೆ. ಹೀಗಾಗಿ ಸಂಭಾವ್ಯ ಸಮಸ್ಯೆ ತಡೆಯುವ ನಿಟ್ಟಿನಲ್ಲಿ ವೇತನ ಕಡಿತ ಮಾಡದೆ ಅರ್ಧ ದಿನ ರಜೆ ನೀಡಬೇಕು ಎಂದು ಪೌರಕಾರ್ಮಿಕರು ಆಗ್ರಹಿಸಿದ್ದಾರೆ.

ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಗಳಿಗೆ ಈ ಕುರಿತು ಅಖಿಲ ಭಾರತ ಕಾರ್ಮಿಕ ಸಂಘಗಳ ಒಕ್ಕೂಟವು ಪತ್ರ ಬರೆದಿದೆ. ಪೌರಕಾರ್ಮಿಕರಿಗೆ ಶಾಖದ ಹೊಡೆತದಿಂದ ರಕ್ಷಿಸಿಕೊಳ್ಳಲು ಹೆಚ್ಚುವರಿ ವಿರಾಮದೊಂದಿಗೆ ಕುಡಿಯುವ ನೀರು, ಒಆರ್‌ಎಸ್ ಮತ್ತು ಮಜ್ಜಿಗೆ ನೀಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

ಶುದ್ಧ ನೀರು ಮತ್ತು ನೈರ್ಮಲ್ಯದ ಶೌಚಾಲಯಗಳಿಂದ ವಂಚಿತರಾಗಿರುವ ಪೌರಕಾರ್ಮಿಕರು ಶಾಖ-ಸಂಬಂಧಿತ ಕಾಯಿಲೆಗಳಿಗೆ ತುತ್ತಾಗುವ ಹೆಚ್ಚಿನ ಅಪಾಯವನ್ನು ಹೊಂದಿದ್ದಾರೆ. ಕಳೆದ ಕೆಲವು ವಾರಗಳಿಂದ ತೀವ್ರತರವಾದ ಶಾಖದಲ್ಲಿ ಕೆಲಸ ಮಾಡುತ್ತಿದ್ದೇವೆ. ಕೆಲವರಿಗೆ ಕೆಲಸದ ವೇಳೆ ಆಯಾಸ, ತಲೆತಿರುಗುವಿಕೆ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹಲವು ಮಂದಿ ಪೌರಕಾರ್ಮಿಕರು ಅಭಿಪ್ರಾಯಪಟ್ಟಿದ್ದಾರೆ.

ಪೌರಕಾರ್ಮಿಕರು ಬೆಳಿಗ್ಗೆ 6 ಗಂಟೆಗೆ ಕೆಲಸ ಪ್ರಾರಂಭಿಸುತ್ತಾರೆ. ಪ್ರತಿದಿನ ಮಧ್ಯಾಹ್ನ 2 ಗಂಟೆಯವರೆಗೆ ಕೆಲಸ ಮಾಡುತ್ತಾರೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮಧ್ಯಾಹ್ನ 11ರಿಂದ 3 ಗಂಟೆಯ ಅವಧಿಯಲ್ಲಿ ಮನೆಯೊಳಗೆ ಇರಲು ಸೂಚನೆ ನೀಡಿರುವುದನ್ನು ಉಲ್ಲೇಖಿಸಿ, ಕೆಲಸದ ಸಮಯವನ್ನು ಬೆಳಿಗ್ಗೆ 11 ಕ್ಕೆ ಕಡಿತಗೊಳಿಸಬೇಕೆಂದು ಒಕ್ಕೂಟ ಮನವಿ ಮಾಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಪಾಕಿಸ್ತಾನದ ಮುಂದೆ ನಮ್ಮ ಎಷ್ಟು ವಿಮಾನ ಕಳೆದುಕೊಂಡಿತು ಲೆಕ್ಕ ಕೊಡಿ

ಟರ್ಕಿ ಸೇಬು ಬಹಿಷ್ಕಾರಕ್ಕೆ ಹೆಚ್ಚಿದ ಒತ್ತಾಯ: 24ರಂದು ಪ್ರಧಾನಿಯೊಂದಿಗೆ ಚರ್ಚೆ

India Pakistan: ತಿನ್ನೋದು ಭಾರತದ ಅನ್ನ, ಸೇವೆ ಮಾತ್ರ ಪಾಕಿಸ್ತಾನಕ್ಕೆ: ಯುಪಿ ವ್ಯಕ್ತಿ ಅರೆಸ್ಟ್

ನಿಮ್ಮ ಪ್ರಾಮಾಣಿಕತೆಯನ್ನು ಮೆಚ್ಚಿದೆ: ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟ ಸಂಸದ ತೇಜಸ್ವಿ ಸೂರ್ಯ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments