ಗುಡ್ಡ ಕುಸಿತ ಮುಂದುವರಿಕೆ: ಜನ ತತ್ತರ

Webdunia
ಸೋಮವಾರ, 27 ಆಗಸ್ಟ್ 2018 (20:15 IST)
ಈ ವರ್ಷ ಮಳೆರಾಯ ಮಲೆನಾಡಿಗರನ್ನು ಬೆಂಬಿಡದೆ ಕಾಡತೊಡಗಿದ್ದಾನೆ. ವರುಣನ ಆರ್ಭಟಕ್ಕೆ ಮತ್ತೆ ಮತ್ತೆ ಅವಘಡಗಳು ಮರುಕಳಿಸುತ್ತಿವೆ.

ಹಾಸನ ಜಿಲ್ಲೆಯ ಸಕಲೇಶಪುರ ಹಾಗೂ ಅರಕಲಗೂಡು ತಾಲೂಕುಗಳಲ್ಲಿ ಸುರಿದ ಮಹಾಮಳೆಗೆ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ.  ಇನ್ನೇನು ಮಳೆ ಕಡಿಮೆಯಾಯಿತು, ಜೀವನ ಸರಿ ಹೋಗುತ್ತದೆ ಎನ್ನುವಷ್ಟರಲ್ಲಿ  ಅವಘಡಗಳು ಮತ್ತೆ ಮತ್ತೆ ಮರುಕಳಿಸುತ್ತಿವೆ.
ಮಳೆ ನಿಂತರೂ ಸಕಲೇಶಪುರ ತಾಲ್ಲೂಕಿನಲ್ಲಿ ಗುಡ್ಡ ಕುಸಿತ ನಿಲ್ಲದಾಗಿದೆ.  ಮತ್ತೆ ರೈಲು ಹಳಿಯ ‌ಮೇಲೆ ಗುಡ್ಡ ಕುಸಿತವಾಗಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಡಕುಮರಿಯ 72ನೇ ಮೈಲಿ ಬಳಿ ಮತ್ತೆ ಗುಡ್ಡ ಕುಸಿತವಾಗಿದೆ. ಕಳೆದ ಕೆಲ ದಿನಗಳಿಂದ ಗುಡ್ಡ ಕುಸಿದು ರೈಲು ಸಂಚಾರ ಬಂದ್ ಆಗಿತ್ತು. ಇನ್ನೇನು ತೆರವು ಕಾರ್ಯ ಪೂರ್ಣವಾಗಿ ರೈಲು ಸಂಚಾರ ಮತ್ತೆ ಆರಂಭವಾಗುತ್ತದೆ ಎನ್ನುವಷ್ಟರಲ್ಲಿ ಮತ್ತೆ ಗುಡ್ಡ ಕುಸಿದಿರುವುದರಿಂದ ರೈಲು ಇಲಾಖೆಗೆ ತಲೆ ನೋವಾಗಿ‌ ಪರಿಣಮಿಸಿದೆ. ಯಡಕುಮರಿಯಲ್ಲಿ ಪದೇ ಪದೆ ಗುಡ್ಡ ಕುಸಿಯುತ್ತಿದ್ದು, ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ದೌಡಾಯಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ಮುಂದಿನ ಸುದ್ದಿ
Show comments