Webdunia - Bharat's app for daily news and videos

Install App

ಚಂದ್ರಶೇಖರ್ ಪ್ರಕರಣ ಮಾಸುವ ಮುನ್ನವೇ ಮತ್ತೊಬ್ಬ ಗುತ್ತಿಗೆದಾರ ನೇಣಿಗೆ ಶರಣು

Krishnaveni K
ಶುಕ್ರವಾರ, 31 ಮೇ 2024 (10:20 IST)
ದಾವಣಗೆರೆ: ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಸಾವಿನ ಪ್ರಕರಣ ಮಾಸುವ ಮುನ್ನವೇ ಗುತ್ತಿಗೆದಾರರೊಬ್ಬರು ನೇಣಿಗೆ ಶರಣಾಗಿರುವುದು ಸರ್ಕಾರಕ್ಕೆ ಮತ್ತೊಮ್ಮೆ ಸಂಕಷ್ಟ ತಂದೊಡ್ಡಿದೆ.

ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನ ಕೃಷಿ ಇಲಾಖೆ ಕಚೇರಿ ಆವರಣದಲ್ಲಿ ಕೈಗೊಂಡ ಕಾಮಗಾರಿಯ ಬಾಕಿ ಹಣ ಸಕಾಲದಲ್ಲಿ ಬಿಡುಗಡೆ ಮಾಡದೇ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಪ್ರಥಮ ದರ್ಜೆ ಗುತ್ತಿಗೆದಾರ ಪಿಎಸ್ ಗೌಡರ್ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು.

ಈ ಬಗ್ಗೆ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದರು. ವಿಪರ್ಯಾಸವೆಂದರೆ ಈ ಘಟನೆ ಮೇ 26 ರಂದು ನಡೆದಿತ್ತು. ಆದರೆ ಈಗಷ್ಟೇ ಬೆಳಕಿಗೆ ಬರುತ್ತಿದೆ. 2023-24 ನೇ ಸಾಲಿನಲ್ಲಿ ಮಾಡಿದ್ದ ಕೆಲಸಗಳಿಗೆ ಹಣ ಬಿಡುಗಡೆ ಮಾಡದೇ ಕೆಆರ್ ಡಿಎಲ್ ಅಧಿಕಾರಿಗಳು ಸತಾಯಿಸುತ್ತಿದ್ದರು. ಅಧಿಕಾರಿಗಳ ಧೋರಣೆಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗ ಡೆತ್ ನೋಟ್ ನಲ್ಲಿ ಬರೆಯಲಾಗಿದೆ.

ಇದರ ಜೊತೆಗೆ ತಮ್ಮ ಸಹೋದರನಿಂದಲೂ ಹಣಕಾಸಿನ ವಂಚನೆಯಾಗಿರುವುದರ ಬಗ್ಗೆ ಡೆತ್ ನೋಟ್ ನಲ್ಲಿ ಬರೆಯಲಾಗಿದೆ. ಎರಡು ಪ್ರತ್ಯೇಕ ಡೆತ್ ನೋಟ್ ಬರೆಯಲಾಗಿದ್ದು ಸಹೋದರ ಮತ್ತು ಅಧಿಕಾರಿಗಳ ವಿರುದ್ಧ ಆರೋಪ ಮಾಡಿದ್ದಾರೆ. ಈ ಬಗ್ಗೆ ಪತ್ನಿ ವಸಂತ ಕುಮಾರಿ ಪೊಲೀಸರಿಗೆ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

ಮುಂದಿನ ಸುದ್ದಿ