ಸಂಚಾರಿ ಕಾನ್ಸಟೇಬಲ್ ಸೇರಿ 16 ಜನಕ್ಕೆ ಕೊರೊನಾ

Webdunia
ಮಂಗಳವಾರ, 2 ಜೂನ್ 2020 (21:00 IST)
ಸಂಚಾರಿ ಪೊಲೀಸ್ ಠಾಣೆ ಕಾನ್ಸಟೇಬಲ್ ಸೇರಿ ಹದಿನಾರು ಜನರಿಗೆ ಕೊರೊನಾ ಪತ್ತೆಯಾಗಿದೆ.

ರಾಯಚೂರಿನ ದೇವದುರ್ಗದ ಕಸ್ತೂರ್ ಬಾ ಕ್ವಾರಂಟೈನ್ ಸೆಂಟರ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್ಸಟೇಬಲ್ ಒಬ್ಬರಿಗೆ ಕೊರೊನಾ ದೃಢಪಟ್ಟಿದ್ದು ಪೊಲೀಸರಿಗೆ ಆತಂಕ ಉಂಟು ಮಾಡಿದೆ.

ಅವಿವಾಹಿತನಾದ ಕಾನ್ಸಟೇಬಲ್ ತನ್ನ ಸ್ನೇಹಿತರೊಂದಿಗೆ ವಾಸವಿದ್ದು, ಈಗ ಆತನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರ ಪತ್ತೆ ಕಾರ್ಯ ನಡೆದಿದೆ. ದೇವದುರ್ಗ ಸಂಚಾರಿ ಪೊಲೀಸ್ ಠಾಣೆ ಸಂಪೂರ್ಣ ಸೀಲ್‌ಡೌನ್ ಮಾಡಲಾಗಿದ್ದು,   ಕಾನ್ಸಟೇಬಲ್ ನನ್ನು ರಾಯಚೂರಿನ ನಿಯೋಜಿತ ಕೊರೊನಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ರಾಯಚೂರು ಜಿಲ್ಲೆಯಲ್ಲಿ 16 ಕೊರೊನಾ ಪ್ರಕರಣಗಳು ಪತ್ತೆ ಸೇರಿದಂತೆ ಒಟ್ಟು 233 ಪ್ರಕರಣಗಳು ಪತ್ತೆಯಾದಂತಾಗಿದೆ. ಇದರಲ್ಲಿ ಅತಿ ಹೆಚ್ಚು 187 ಸೋಂಕಿತರು ದೇವದುರ್ಗ ತಾಲೂಕಿನವರಾಗಿದ್ದು, ಇವರೆಲ್ಲರೂ ಮಹಾರಾಷ್ಟ್ರದಿಂದ ಬಂದಿದ್ದು, ದೇವದುರ್ಗದ ವಿವಿಧ ಕ್ವಾರಂಟೈನ್‌ಗಳಲ್ಲಿ ಇದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಪೋಟಕ ಅಡಿಯೋ ಕೋರ್ಟ್ ಗೆ ಸಲ್ಲಿಸಬೇಕು ಎನ್ನುವಷ್ಟರಲ್ಲೇ ಸ್ನೇಹಮಯಿ ಕೃಷ್ಣ ಅರೆಸ್ಟ್ ಆಗಿದ್ದು ಯಾಕೆ

ಸುಪ್ರೀಂಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದು ಮತ್ತೆ 10 ಶೇ ಟಾರಿಫ್ ಹೆಚ್ಚಿಸಿದ ಡೊನಾಲ್ಡ್ ಟ್ರಂಪ್

Karnataka Weather: ಗುಡ್ ನ್ಯೂಸ್ ವಾರಂತ್ಯಕ್ಕೆ ಈ ಜಿಲ್ಲೆಗೆ ಮಳೆಯ ಸೂಚನೆ

ನನ್ನ ಹಾದಿ ಹೂವಿನ ಹಾಸಿಗೆಯಾಗಿರಲಿಲ್ಲ, ಕೊನೆ ಉಸಿರುವವರೆಗೂ ಹೋರಾಡುತ್ತೇನೆ: ಸಿದ್ದರಾಮಯ್ಯ ಸಂಚಲನದ ಪೋಸ್ಟ್

ಶಿವಾಜಿ ಜಯಂತಿ ವೇಳೆ ಕಲ್ಲೆಸೆದವರ ಮೇಲೆ ಕ್ರಮಕ್ಕೆ ವಿಜಯೇಂದ್ರ ಆಗ್ರಹ video

ಮುಂದಿನ ಸುದ್ದಿ
Show comments