Publish Date: Tue, 04 Aug 2020 (10:46 IST)
Updated Date: Tue, 04 Aug 2020 (10:47 IST)
ಬೆಂಗಳೂರು : ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ.
ನಿನ್ನೆ ರಾತ್ರಿ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಆ ವೇಳೆ ಕೊರೊನಾ ಟೆಸ್ಟ್ ಮಾಡಿಸಿದಾಗ ವರದಿಯಲ್ಲಿ ಪಾಸಿಟಿವ್ ಬಂದಿದೆ. ಈ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಬಿಬಿಎಂಪಿ ಸ್ಯಾನಿಟೈಸ್ ಮಾಡಿದೆ. ಹಾಗೇ ಸಿದ್ದರಾಮಯ್ಯ ಕುಟುಂಬದವರಿಗೂ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು, ಅವರ ಸಂಪರ್ಕದಲ್ಲಿದ್ದವರು ಕ್ವಾರಂಟೈನ್ ಆಗುವಂತೆ ಸೂಚಿಸಲಾಗಿದೆ. ಹಾಗೇ ಸಿದ್ದರಾಮಯ್ಯ ಅವರ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿದ್ದು, ಅವರ ಆರೋಗ್ಯ ಈಗ ಸ್ಥಿರವಾಗಿದೆ ಎಂಬುದಾಗಿ ತಿಳಿದುಬಂದಿದೆ.
pavithra
Publish Date: Tue, 04 Aug 2020 (10:46 IST)
Updated Date: Tue, 04 Aug 2020 (10:47 IST)