Webdunia - Bharat's app for daily news and videos

Install App

ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಪ್ರಾರಂಭವಾಗಿದೆ - ಆರೋಗ್ಯ ಸಚಿವ ಡಾ. ಸುಧಾಕರ್

Webdunia
ಬುಧವಾರ, 5 ಜನವರಿ 2022 (19:41 IST)
ಬೆಂಗಳೂರು : ದೇಶದಲ್ಲಿ ದಿನದಿಂದ ದಿನಕ್ಕೆ  ಕೊರೊನಾ ಪ್ರಕರಣ ಸಂಖ್ಯೆ  ಹೆಚ್ಚಾಗುತ್ತಿದೆ. ಬೆಂಗಳೂರು , ದೆಹಲಿ ಹಾಗೂ  ಮಹಾರಾಷ್ಟ್ರದಲ್ಲೂ  ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ಬೆಂಗಳೂರಿಗೆ ವಿಶೇಷ ಕ್ರಮ ತೆಗೆದುಕೊಳ್ಳುವುದು ಅತ್ಯಂತ ಅವಶ್ಯಕ ಎಂದು ರಾಜ್ಯ ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.
ಇತ್ತೀಚೆಗಿನ ಕೊರೊನಾ ಪ್ರಕರಣಗಳನ್ನು ಗಮನಿಸುವುದಾದರೆ ಒಂದೇ ದಿನ ಬೆಂಗಳೂರಿನಲ್ಲಿ ಶೇ.1.90 ರಷ್ಟು ಏರಿಕೆಯಾಗಿದ್ದು, 1,290 ಕೇಸ್ ಪತ್ತೆ ಆಗಿದೆ. ಈಗಾಗಲೇ ಶೇ.90 ಕೊರೊನಾ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರು ಏರ್‌ಪೋರ್ಟ್ ಸೇರಿದಂತೆ ಅನೇಕ ಕಡೆ ನಿಗಾ ವಹಿಸುತ್ತೇವೆ ಎಂದು ತಿಳಿಸಿದ್ದಾರೆ.
ಓಮಿಕ್ರಾನ್ ವೇಗವಾಗಿ ಹರಡುತ್ತಿದೆ. ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಪ್ರತಿ ದಿನ ಹೆಚ್ಚಾಗುತ್ತಿದೆ. ದೆಹಲಿ, ಮಹಾರಾಷ್ಟ್ರದಲ್ಲಿ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಬಗ್ಗೆ ನಮ್ಮ ಸರ್ಕಾರ ವಿಶೇಷ ಕಾಳಜಿ ವಹಿಸುತ್ತಿದೆ. ರಾಜ್ಯಕ್ಕೆ ಮೂರನೇ ಅಲೆ ಈಗಾಗಲೇ ಬಂದಿದೆ. ಇದು ಮೂರನೇ ಅಲೆಯ ಪ್ರಾರಂಭದ ಹಂತ ಎಂದು ಸಚಿವ ಡಾ. ಸುಧಾಕರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments