Publish Date: Fri, 24 Feb 2023 (10:59 IST)
Updated Date: Fri, 24 Feb 2023 (10:22 IST)
ಬಳ್ಳಾರಿ : ಚುನಾವಣಾ ರಾಜ್ಯ ಕರ್ನಾಟಕಕ್ಕೆ ಕೇಂದ್ರ ನಾಯಕರು ಪದೇ ಪದೇ ಭೇಟಿ ನೀಡುತ್ತಿದ್ದು, ರಾಜ್ಯದಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸುತ್ತಿದ್ದಾರೆ.
ಅದರಂತೆ ಇಂದು ಮತ್ತೊಮ್ಮೆ ಕೇಂದ್ರ ಗೃಹಸಚಿವ ಅಮಿತ್ ಶಾ ರಾಜ್ಯಕ್ಕೆ ಕಾಲಿಟ್ಟಿದ್ದು, ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಚುನಾವಣಾ ರಣತಂತ್ರಗಾರಿಕೆ ರೂಪಿಸಿದ್ದಾರೆ.
ರಾಜ್ಯದಲ್ಲಿ ಸಂಪೂರ್ಣ ಬಹುಮತದ ಸರ್ಕಾರ ರಚನೆ ಆಗಲಿದೆ. ನನ್ನ ಜೊತೆ ಕೈ ಜೋಡಿಸಿ, ಸಂಪೂರ್ಣ ಪ್ರಮಾಣದ ಸರ್ಕಾರ ಕೊಡಿ. 2018ರ ಚುನಾವಣೆಯಲ್ಲಿ ಬಿಎಸ್ವೈ ನೇತೃತ್ವದಲ್ಲಿ ಚುನಾವಣೆಗೆ ಹೋಗಿದ್ವಿ. ಆದರೆ ಸ್ವಲ್ಪದರಲ್ಲಿ ನಮಗೆ ಸರ್ಕಾರ ರಚನೆ ಮಾಡಲು ಆಗಲಿಲ್ಲ.