Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಸಿಎಂ ಬೊಮ್ಮಾಯಿ ಅವರಿಗೆ ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ಇಂದು ಅಧಿಕಾರಿಗಳ ಜೊತೆ ವರ್ಚುವಲ್ ಸಭೆ ನಡೆಸಿ, ಕೊರೊನಾ ನಿಯಂತ್ರಣ ಸಂಬಂಧ ಚರ್ಚಿಸಿದರು.
ರಾಜ್ಯದ ಕೋವಿಡ್ ಸ್ಥಿತಿಗತಿಗೆ ಸಂಬಂಧಪಟ್ಟಂತೆ ಹಿರಿಯ ಅಧಿಕಾರಿಗಳ ಮತ್ತು ತಾಂತ್ರಿಕ ಸಲಹಾ ಸಮಿತಿಯ ಸದಸ್ಯರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವರ್ಚುವಲ್ ಸಭೆ ನಡೆಸುತ್ತಿದ್ದಾರೆ.
ಆರ್.ಟಿ ನಗರದಲ್ಲಿ ಖಾಸಗಿ ನಿವಾಸದಿಂದ ವರ್ಚುವಲ್ ಮೂಲಕ ಸಿಎಂ ಸಭೆ ನಡೆಸಿದ್ದು, ಆರೋಗ್ಯ ಸಚಿವ ಸುಧಾಕರ್ ಹಾಗೂ ಇತರೆ ಅಧಿಕಾರಿಗಳು, ತಾಂತ್ರಿಕ ಸಲಹಾ ಸಮಿತಿ ಸದಸ್ಯರು ವರ್ಚುವಲ್ ಮೂಲಕವೇ ಸಭೆಗೆ ಹಾಜರಾದರು.