ಬಿ.ಪಿ.ಎಲ್. ಕಾರ್ಡ್ ಇದ್ರೆ ಕ್ರಿಮಿನಲ್ ಕೇಸ್ ಬೀಳೋದು ಪಕ್ಕಾ

Webdunia
ಶನಿವಾರ, 14 ಮಾರ್ಚ್ 2020 (16:37 IST)
ಬಿ.ಪಿ.ಎಲ್ ಕಾರ್ಡ್ ಗಳನ್ನು ಅಕ್ರಮವಾಗಿ ಹೊಂದಿದವರ ವಿರುದ್ಧ ಜಿಲ್ಲಾಧಿಕಾರಿ ಖಡಕ್ ಕ್ರಮಕ್ಕೆ ಮುಂದಾಗಿದ್ದು, ಕ್ರಿಮಿನಲ್ ಕೇಸ್ ಹಾಕೋದಾಗಿ ಎಚ್ಚರಿಕೆ ನೀಡಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್‍ನ್ನು ಪಡೆದಿದ್ದು, ಸರ್ಕಾರವು ಗಂಭೀರ ಕ್ರಮ ಕೈಗೊಳ್ಳುವ ಮುನ್ನ ಸ್ವಯಂ ಪ್ರೇರಣೆಯಿಂದ ತಮ್ಮ ಹತ್ತಿರದ ಆಹಾರ ಇಲಾಖೆಗೆ ಏಪ್ರಿಲ್ ಅಂತ್ಯದವರೆಗೆ ಹಿಂದಿರುಗಿಸಬೇಕೆಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಶರತ್ ಖಡಕ್ ಸೂಚನೆ ನೀಡಿದ್ದಾರೆ.

ಅನರ್ಹರು  ನಿಗದಿತ ಅವಧಿಯೊಳಗಾಗಿ ಆಯಾ ತಾಲೂಕುಗಳ ತಹಶೀಲ್ದಾರರ ಕಚೇರಿಯಲ್ಲಿನ ಆಹಾರ ಶಿರಸ್ತೇದಾರ, ಆಹಾರ ನಿರೀಕ್ಷಕರನ್ನು ಹಾಗೂ ಕಲಬುರಗಿ ಸಹಾಯಕ ನಿರ್ದೇಶಕರ (ಪಡಿತರ) ಕಚೇರಿಯ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ ತಾವು ಹೊಂದಿರುವ ಬಿ.ಪಿ.ಎಲ್. ಪಡಿತರ ಚೀಟಿಯನ್ನು ಎ.ಪಿ.ಎಲ್. ಪಡಿತರ ಚೀಟಿಯನ್ನಾಗಿ ವರ್ಗಾವಣೆ ಮಾಡಿಕೊಳ್ಳಲು ಅಥವಾ ರದ್ದುಪಡಿಸಲು ಅವಕಾಶ ಕಲ್ಪಿಸಲಾಗಿದೆ.  ತಾವೇ ಹೀಗೆ ಖುದ್ದಾಗಿ ಬಂದು ಬಿ.ಪಿ.ಎಲ್. ಪಡಿತರ ಚೀಟಿಯನ್ನು ಹಿಂತಿರುಗಿಸಿದರೆ ತಮ್ಮ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳಲಾಗುವುದಿಲ್ಲ.

 ನಿಗದಿತ ಅವಧಿಯಲ್ಲಿ ಪಡಿತರ ಚೀಟಿ ಹಿಂದಿರುಗಿಸದೆ ಹೋದಲ್ಲಿ  ದಂಡ ವಸೂಲಿ ಮಾಡುವುದರ  ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಡಿಸಿ ಎಚ್ಚರಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಂತಿ ಮಾತುಕತೆ ನಡುವೆಯೇ ಇರಾನ್ ಮೇಲೆ ಅಮೆರಿಕಾ ದಾಳಿ

ಸಿದ್ದರಾಮಯ್ಯನವರ ಮನವೊಲಿಸಲು ಹೈಕಮಾಂಡ್ ಮುಂದೆ ಇರುವುದು ಇದೊಂದೇ ಅಸ್ತ್ರ

ಸಿದ್ದರಾಮಯ್ಯ ದೆಹಲಿಯಿಂದ ಬಂದ ತಕ್ಷಣ ಹೀಗೆ ಮಾಡಿದ್ರೆ ಸಿಎಂ ಬದಲಾವಣೆ ಪಕ್ಕಾ ಎಂದರ್ಥ

ಕರ್ನಾಟಕ ಸಿಎಂ ಬದಲಾವಣೆ ವಿಚಾರ: ನಂದೇನೂ ಇಲ್ಲ ಎಲ್ಲಾ ರಾಹುಲ್ ಜೀ ಹೇಳ್ತಾರೆ ಎಂದ ಖರ್ಗೆ, ಇಂದು ಕ್ಲೈಮ್ಯಾಕ್ಸ್ ನಿರೀಕ್ಷೆ

Karnataka Weather: ಕರ್ನಾಟಕದಲ್ಲಿ ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ

ಮುಂದಿನ ಸುದ್ದಿ
Show comments