ಪ್ರವಾಸಿ ತಾಣಗಳಲ್ಲಿ ಜನಸಾಗರ

Webdunia
ಭಾನುವಾರ, 1 ಜನವರಿ 2023 (16:52 IST)
2022 ಮುಗಿದು ನೂತನ ವರ್ಷಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾದ್ಯಂತ ಸಂಭ್ರಮಾಚರಣೆಗಳು ಜೋರಾಗಿ ನಡೆದಿದ್ದು ಪ್ರವಾಸಿ ತಾಣಗಳು ತುಂಬಿ ತುಳುಕುತ್ತಿವೆ. ವರ್ಷರಂಭ ಭಾನುವಾರವೇ ಬಂದ ಹಿನ್ನೆಲೆಯಲ್ಲಿ ರಜೆ ಜೊತೆಗೆ ನ್ಯೂ ಇಯರ್ ಸೆಲೆಬ್ರೇಷನ್​​ಗೆ ಹೊಸ ಕಳೆ ಬಂದಂತಿತ್ತು. ಗುಂಡ್ಲುಪೇಟೆ ತಾಲೂಕಿನ ಬಂಡೀಪುರ, ಹಿಮವದ್ ಗೋಪಾಲಸ್ವಾಮಿ ಬೆಟ್ಟ, ಯಳಂದೂರಿನ ಬಿಳಿಗಿರಿರಂಗನನಾಥ ದೇವಾಲಯ, ಚಾಮರಾಜನಗರ ತಾಲೂಕಿನ ಕೆ.ಗುಡಿ, ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಜನಸಾಗರವೇ ಹರಿದುಬಂದಿದೆ‌. ವರ್ಷದ ಕೊನೆಯ ದಿನವಾದ ಶನಿವಾರ ಮಲೆಮಹದೇಶ್ವರ ಬೆಟ್ಟದಲ್ಲಿ ನೂರಾರು ಭಕ್ತರು ಚಿನ್ನದ ರಥ ಎಳೆದು ಪುನೀತರಾಗಿದ್ದು, ನೂತನ ವರ್ಷಕ್ಕೆ ವಿವಿಧ ಪ್ರಾರ್ಥನೆಗಳನ್ನು ಸಲ್ಲಿಸಿ ಮಲೆ ಮಹದೇಶ್ವರನಿಗೆ ಮಧ್ಯರಾತ್ರಿ ಜೈಕಾರ ಹಾಕಿದ್ದಾರೆ. ಇನ್ನು, ಬಿಳಿಗಿರಿರಂಗನನಾಥ ದೇವಾಲಯ ಹಾಗೂ ಗೋಪಾಲಸ್ವಾಮಿ ಬೆಟ್ಟಕ್ಕಂತೂ ಬೈಕ್ ರೈಡರ್​​ಗಳು, ಕುಟುಂಬ ಹಾಗೂ ಸ್ನೇಹಿತರ ಗುಂಪುಗಳೇ ಸೇರಿದ್ದು ನೂತನ ವರ್ಷವನ್ನು ಪ್ರಕೃತಿ ಮಡಿಲಲ್ಲಿ ಕಳೆಯುತ್ತಾ ಸಂಭ್ರಮಿಸಿದ್ದಾರೆ‌.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments