Webdunia - Bharat's app for daily news and videos

Install App

ಹೊಸ ವರ್ಷಾಚರಣೆಗೆ ಹರಿದುಬಂದ ಜನಸಾಗರ : 3 ಲಕ್ಷಕ್ಕೂ ಅಧಿಕ ಜನ ಭಾಗಿ

Webdunia
ಭಾನುವಾರ, 1 ಜನವರಿ 2023 (09:46 IST)
ಬೆಂಗಳೂರು : ನಗರದಲ್ಲಿ ನಡೆದ ನ್ಯೂ ಇಯರ್ ಸೆಲೆಬ್ರೇಷನ್ ದೊಡ್ಡ ದಾಖಲೆ ಎಂದೇ ಹೇಳಬಹುದು. ಯಾಕಂದ್ರೆ ಪೊಲೀಸರು ನಿರೀಕ್ಷೆ ಮಾಡಿದ್ದಕ್ಕಿಂತ ಎರಡು ಪಟ್ಟು ಜನ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದಾರೆ.

ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಎಂ.ಜಿ ರಸ್ತೆಯಲ್ಲಿ ಸಂಭ್ರಮಾಚರಣೆಗೆ ಬಂದ ಜನರ ಸಂಖ್ಯೆ ಸುಮಾರು 3 ಲಕ್ಷಕ್ಕೂ ಅಧಿಕ ಎಂದು ಅಂದಾಜಿಸಲಾಗಿದೆ.

ಕಳೆದೆರಡು ವರ್ಷಗಳಿಂದ ಕೊರೊನಾ ಹಿನ್ನೆಲೆಯಲ್ಲಿ ವರ್ಷಾಚರಣೆಗೆ ಬ್ರೇಕ್ ಬಿದ್ದಿತ್ತು. ಈ ವರ್ಷ ಕೊರೊನಾ ರೂಪಾಂತರಿ ಆತಂಕ ಇದ್ರೂ ನಿರ್ಬಂಧಗಳ ಜೊತೆ ಹೊಸ ವರ್ಷ ಸ್ವಾಗತಿಸಲು ಅವಕಾಶ ಕಲ್ಪಿಸಿಕೊಡಲಾಗಿತ್ತು. ಈ ಹಿನ್ನೆಲೆಯಲ್ಲಿ ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಎಂ.ಜಿ ರಸ್ತೆಯಲ್ಲಿ ಜನಸಾಗರ ಸೇರಿತ್ತು. ಒಂದು ಅಂದಾಜಿನ ಪ್ರಕಾರ ಸಂಭ್ರಮಾಚರಣೆಗೆ ಬಂದ ಜನರ ಸಂಖ್ಯೆ ಸುಮಾರು 3 ಲಕ್ಷಕ್ಕೂ ಹೆಚ್ಚಿತ್ತು ಎಂದು ಹೇಳಲಾಗುತ್ತಿದೆ. 

ಕೊರೊನಾದಿಂದಾಗಿ ಕಳೆದೆರಡು ವರ್ಷಗಳಿಂದ ಡಲ್ ಹೊಡೆದಿದ್ದ ಹೊಸ ವರ್ಷಾಚರಣೆ ಈ ಬಾರಿ ಗ್ರ್ಯಾಂಡ್ ಆಗಿ ಜರುಗಿದೆ. ಜನ ಕಳೆದೆರಡು ವರ್ಷ ಜನ ವರ್ಷಾರಣೆಗೆ ನಿರ್ಬಂಧ ವಿಧಿಸಿದ್ದ ಹಿನ್ನೆಲೆ ಮನೆಯಿಂದ ಹೊರ ಬಂದಿರಲಿಲ್ಲ. ಈ ಬಾರಿ ಅವಕಾಶವಿದ್ದ ಕಾರಣ ಬೆಂಗಳೂರಿನ ಎಂಜಿ ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್ನಲ್ಲಂತೂ ಜನಸಾಗರವೇ ಸೇರಿತ್ತು.

ಹಾಡು, ಕುಣಿತ, ಡ್ಯಾನ್ಸ್, ಮಸ್ತಿ ಮಾಡಿ, ಪಟಾಕಿ ಸಿಡಿಸಿ ಹೊಸ ವರ್ಷವನ್ನು ಬರಮಾಡಿಕೊಂಡರು. ಬಾರ್, ಪಬ್, ಕ್ಲಬ್ಗಳಲ್ಲಿ ಸೇರಿದ್ದ ಪಾರ್ಟಿ ಪ್ರಿಯರು ಸಖತ್ ಎಂಜಾಯ್ ಮಾಡಿದರು. ಸಂಭ್ರಮಾಚರಣೆ ಬಳಿಕ ಪ್ರಮುಖ ರಸ್ತೆಗಳಲ್ಲಿ ಗಂಟೆಗಟ್ಟಲೇ ಟ್ರಾಫಿಕ್ ಜಾಮ್ನಿಂದ ವಾಹನ ಸವಾರರು ಪರದಾಡಿದರು. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments