ಖರ್ಗೆ ಹೇಳಿಕೆಗೆ ಸಿ.ಟಿ.ರವಿ ತಿರುಗೇಟು

Webdunia
ಬುಧವಾರ, 21 ಡಿಸೆಂಬರ್ 2022 (19:58 IST)
ದೇಶಕ್ಕಾಗಿ ಬಿಜೆಪಿ ಮನೆಯ ನಾಯಿಯೂ ಸತ್ತಿಲ್ಲ ಎಂದಿದ್ದ ಖರ್ಗೆ ಹೇಳಿಕೆಗೆ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ. ಭಾರತದಲ್ಲಿ ಈಗಿರೋದು ಇಟಲಿ ಕಾಂಗ್ರೆಸ್. ಇಟಲಿ ಕಾಂಗ್ರೆಸ್ ನಾಯಿಗಳೂ ಭಾರತದ ಪರವಾಗಿ ಬೊಗಳುವುದಿಲ್ಲ ಅಂತಾ ಪರೋಕ್ಷವಾಗಿಯೇ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯನ್ನು ನಾಯಿ ಎಂದು ಸಿ.ಟ.ರವಿ ಸಂಬೋಧಿಸಿದ್ದಾರೆ. ಬೆಳಗಾವಿಯ ಖಾಸಗಿ ಹೊಟೇಲ್‌ನಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ. ಕಾಲಕಾಲಕ್ಕೆ ತಕ್ಕಂತೆ ಕಾಂಗ್ರೆಸ್ ಬದಲಾವಣೆ ಆಗುತ್ತದೆ. ಸ್ವಾತಂತ್ರ್ಯ ಪೂರ್ವದಲ್ಲಿದ್ದ ಕಾಂಗ್ರೆಸ್ ಬೇರೆ, ಈಗಿರುವ ಕಾಂಗ್ರೆಸ್ ಬೇರೆ. ದೇಶಕ್ಕೆ ಕಾಂಗ್ರೆಸ್ ಸ್ವಾತಂತ್ರ್ಯ ತಂದು ಕೊಟ್ಟಿದೆ ಎಂದು ಹೇಳುತ್ತದೆ. ಸ್ವಾತಂತ್ರ್ಯ ಕೊಡುಗೆ ಕೊಟ್ಟಿರೋದು ಭಾರತ ಲೂಟಿ ಮಾಡೋದಕ್ಕಾ.? ಮಾಜಿ ಸ್ಪೀಕರ್ ರಮೇಶ ಕುಮಾರ್ ಹೇಳಿದಂತೆ ಕಾಂಗ್ರೆಸ್ ನಾಯಕರು ನಾಲ್ಕೈದು ತಲೆಮಾರಿಗಾಗುವಷ್ಟು ಆಸ್ತಿ ಮಾಡಿಕೊಂಡಿದ್ದಾರೆ. ಖರ್ಗೆಯವರೇ ಎಚ್ಚರವಾಗಿರಿ, ಪಾಕಿಸ್ತಾನ ಪರವಾಗಿ ಬೊಗಳುವ ನಾಯಿಯನ್ನು ಸಾಕಿದ್ದೀರಿ. ಕಾಂಗ್ರೆಸ್ ನಾಯಿ ಸರ್ಜಿಕಲ್ ಸ್ಟ್ರೈಕ್ ಆದ್ರೆ ಭಾರತದ ವಿರುದ್ಧವಾಗಿ ಬೊಗಳುತ್ತೆ. ಆ ನಾಯಿ ಭಾರತದ ಪರವಾಗಿ ಬೊಗಳಲ್ಲ’ ಅಂತಾ ಕಾಂಗ್ರೆಸ್​​​​​​​ ವಿರುದ್ದ ಸಿ.ಟಿ.ರವಿ ಕಿಡಿಕಾರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ರಾಜ್ಯ ಸರ್ಕಾರ ಬಾಂಗ್ಲಾದೇಶವರಿಗೆ ಪೌರತ್ವ ಕೊಡಲು ಆಗುತ್ತದೆಯೇ

ಮಗುವನ್ನು ನೆಲಕ್ಕೆ ಬಡಿದು ಕೊಂದ ಪಾಪಿಗೆ ಗಲ್ಲು ಶಿಕ್ಷೆ: ಎಲ್ಲಾ ಪ್ರಕರಣವೂ ಇಷ್ಟು ಬೇಗ ಇತ್ಯರ್ಥವಾಗಬೇಕು ಎಂದ ಪಬ್ಲಿಕ್

ಒಂದು ಸೂರು, ಆರು ತಲೆಮಾರುಗಳು, 83 ಸದಸ್ಯರು, ನಾಗಪ್ಪರ ಅವಿಭಕ್ತ ಕುಟುಂಬದ ಒಂದು ಲುಕ್, Video

ಮೈಸೂರು ದಸರಾದಲ್ಲಿ ಕಂಬಳ ಬೇಡ ಎಂದ ವಿಜಯೇಂದ್ರ: ಯದುವೀರ್ ಒಡೆಯರ್ ಗೆ ಬೆಂಬಲ

ಮುಂದಿನ ಸುದ್ದಿ
Show comments