Webdunia - Bharat's app for daily news and videos

Install App

ಕಾಮೆಂಟ್ ಗಳಿಗೆ ಹತ್ಯೆ ಮಾಡುವುದಾದರೆ ರಾಜಕಾರಣಿಗಳು ದಿನಕ್ಕೊಂದು ಹತ್ಯೆ ಮಾಡಬೇಕಾದೀತು: ಸಿಟಿ ರವಿ

Krishnaveni K
ಶುಕ್ರವಾರ, 14 ಜೂನ್ 2024 (16:09 IST)
ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ನಡೆಸಿದ ಪ್ರಕರಣಕ್ಕೆ ಸಂಬಂದಿಸಿದಂತೆ ಬಿಜೆಪಿ ಶಾಸಕ ಸಿಟಿ ರವಿ ಕಿಡಿ ಕಾರಿದ್ದಾರೆ. ಕಾಮೆಂಟ್ ಗಳಿಗೆ ಹತ್ಯೆ ಮಾಡುವುದಿದ್ದರೆ ರಾಜಕಾರಣಿಗಳು ದಿನಕ್ಕೊಂದು ಹತ್ಯೆ ಮಾಡಬೇಕಾದೀತು ಎಂದಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿ ಮುಚ್ಚಿದ ಪರದೆಯೊಳಗೆ ವಿಚಾರಣೆ ನಡೆಸುತ್ತಿರುವ ಪೊಲೀಸರ ಕ್ರಮವನ್ನೂ ಟೀಕಿಸಿದ್ದಾರೆ.

ದರ್ಶನ್ ಪ್ರಕರಣದಲ್ಲಿ ಪೊಲೀಸ್ ಠಾಣೆ ಸುತ್ತ ಶಾಮಿಯಾನ ಹಾಕಿ, 144ನೇ ಸೆಕ್ಷನ್ ವಿಧಿಸಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದ್ದರ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಇದು ಪೊಲೀಸ್ ಇಲಾಖೆ ಮೇಲಿನ ಸಾರ್ವಜನಿಕರ ನಂಬಿಕೆಗೆ ಚ್ಯುತಿ ತರುವಂತಿದೆ. ದರ್ಶನ್ ಪ್ರಕರಣ, ರೇಣುಕಸ್ವಾಮಿ ಹತ್ಯೆ ಗಮನಿಸಿದರೆ, ಇಂಥ ಕಾಮೆಂಟ್‍ಗಳಿಗೆ ಹತ್ಯೆ ಮಾಡುವುದಾದರೆ ರಾಜಕಾರಣಿಗಳು ದಿನಕ್ಕೊಂದು ಹತ್ಯೆ ಮಾಡಬೇಕಾದೀತು ಎಂದು ಉತ್ತರ ಕೊಟ್ಟರು. ಇಂಥ ಕಾಮೆಂಟ್ ದಿನವೂ ಬರುತ್ತದೆ. ಸೋಷಿಯಲ್ ಮೀಡಿಯದಲ್ಲಿ ಅವ್ವ, ಹೆಂಡತಿ, ಅಜ್ಜಿ, ಮುತ್ತಜ್ಜಿ ವರೆಗೂ ಮಾತನಾಡಿದವರಿದ್ದಾರೆ. ಈ ಹತ್ಯೆ ಮನುಕುಲ ತಲೆ ತಗ್ಗಿಸುವ ವಿಚಾರ ಎಂದು ನುಡಿದರು.

ನಿನ್ನೆಯೂ ಕರ್ನಾಟಕ ಬಿಜೆಪಿ ಘಟಕ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿರುವುದನ್ನು ಪ್ರಶ್ನೆ ಮಾಡಿತ್ತು. ಈ ರೀತಿ ತೆರೆಮರೆಯಲ್ಲಿ ತನಿಖೆ ನಡೆಸಬೇಕಾದ ಅಗತ್ಯವೇನಿದೆ ಎಂದು ಟೀಕಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಪಾಕಿಸ್ತಾನದ ಮುಂದೆ ನಮ್ಮ ಎಷ್ಟು ವಿಮಾನ ಕಳೆದುಕೊಂಡಿತು ಲೆಕ್ಕ ಕೊಡಿ

ಟರ್ಕಿ ಸೇಬು ಬಹಿಷ್ಕಾರಕ್ಕೆ ಹೆಚ್ಚಿದ ಒತ್ತಾಯ: 24ರಂದು ಪ್ರಧಾನಿಯೊಂದಿಗೆ ಚರ್ಚೆ

India Pakistan: ತಿನ್ನೋದು ಭಾರತದ ಅನ್ನ, ಸೇವೆ ಮಾತ್ರ ಪಾಕಿಸ್ತಾನಕ್ಕೆ: ಯುಪಿ ವ್ಯಕ್ತಿ ಅರೆಸ್ಟ್

ನಿಮ್ಮ ಪ್ರಾಮಾಣಿಕತೆಯನ್ನು ಮೆಚ್ಚಿದೆ: ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟ ಸಂಸದ ತೇಜಸ್ವಿ ಸೂರ್ಯ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments