ದಲಿತರಿಗೆ ದೇವಸ್ಥಾನ ಪ್ರವೇಶ ನಿಷೇಧ: ಸವರ್ಣೀಯರ ಬಂಧನ

Webdunia
ಶುಕ್ರವಾರ, 4 ಮೇ 2018 (13:27 IST)
ಕೊಪ್ಪಳ ಜಿಲ್ಲೆಯ ಈ ಗ್ರಾಮದಲ್ಲಿ ದಲಿತರಿಗೆ ದೇವಸ್ಥಾನ ಪ್ರವೇಶ ನಿಷೇಧ ಮಾಡಲಾಗಿದೆ. ದಲಿತ ಸಮುದಾಯದವರು ದೇವಾಲಯ ಪ್ರವೇಶಿಸುವಂತಿಲ್ಲ ಎಂದು ಕಟ್ಟಾತ್ರೆ ಹೊರಡಿಸಲಾಗಿದೆ.
ದೇವಸ್ಥಾನ ದ ಒಳಗೆ ಬೇಡ ಪಲ್ಲಕ್ಕಿ ಸೇವೆ ಮಾಡಲು ಅವಕಾಶ  ನೀಡಿ  ಎಂದು  ಕೇಳಿದ ದಲಿತ ಯುವಕರಿಗೆ ಥಳಿಸಲಾಗಿದೆ. ಸಂವಿಧಾನ ಬದ್ದ ಹಕ್ಕು ಎಂದುಪ್ರಶ್ನೆ ಮಾಡಿದ ದಲಿತ ಯುವಕರಿಗೆ ಸುವರ್ಣಿಯರು  ಹಲ್ಲೆ ಮಾಡಿದ್ದಾರೆ. ಜಿಲ್ಲೆಯ ಮೈನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. 
 
ಮೈನಳ್ಳಿಯ ಗ್ರಾಮ ದೇವತೆ ಬುಡ್ಡಮ್ಮ ದೇವಿಯ ಜಾತ್ರೆಯಲ್ಲಿ ದಲಿತರು ದೇವಸ್ಥಾನ ಪ್ರವೇಶ ಮಾಡಿದ್ದಾರೆ.  ಹೀಗಾಗಿ 4 ಜನ ದಲಿತ ಯುಕರ ಮೇಲೆ ಹಲ್ಲೆ ಮಾಡಿರುವ ವಿಷಯ  ತಡವಾಗಿ ಬೆಳಕಿಗೆ ಬಂದಿದೆ.  ಜಾತ್ರೆ ನಡೆದ ಸಂದರ್ಭದಲ್ಲಿ ಘಟನೆ ನಡೆದಿದೆ. 
 
ಘಟನೆ ಹಿನ್ನಲೆ 30 ಕ್ಕೂ ಹೆಚ್ಚು ಸವರ್ಣಿಯರನ್ನು ಅಟ್ರಾಸಿಟಿ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಬಿಗುವಿನ ವಾತವರಣವಿದೆ ಎನ್ನಲಾಗಿದೆ.
 
ಅನ್ ಟಚೇಬಲಿಟಿ ಇನ್ನೂ ಜೀವಂತವಾಗಿ ಮೈನಹಳ್ಳಿ ಗ್ರಾಮದಲ್ಲಿದೆ. ದಲಿತರಿಗೆ ಹೊಟೇಲ್, ದೇವಸ್ಥಾನ, ಕಟಿಂಗ್  ಶಾಪ್‌ಗಳಲ್ಲಿ ಪ್ರವೇಶ ಇಲ್ಲಾ. ಸ್ವಾತಂತ್ರ್ಯ ಸಿಕ್ಕು ಇಷ್ಟು ವರ್ಷಗಳು ಕಳೆದರೂ ಕೊಪ್ಪಳ ಜಿಲ್ಲೆಯಲ್ಲಿ ದಲಿತರು ಇನ್ನೂ ಗುಲಾಮಗಿರಿಯಲ್ಲಿದ್ದಾರೆ. ಮುಂಜಾಗ್ರತಾ ಕ್ರಮವಾಗಿ 2 ಡಿಎಆರ್ ತುಕಡಿಗಳ ನಿಯೋಜನೆ ಮಾಡಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಬೈಕ್ ಸವಾರನ ಅತಿ ವೇಗದ ಚಾಲನೆಗೆ ವಿದ್ಯುತ್ ಕಂಬವೇ ಎರಡು ತುಂಡು, ಮೈ ಝುಮ್ಮೆನಿಸುತ್ತದೆ, Video

ಕೋಝಿಕ್ಕೋಡ್‌ನ ಜಯಲಕ್ಷ್ಮಿ ಸಿಲ್ಕ್ಸ್‌ನಲ್ಲಿ ಜನ ಕಿಕ್ಕಿರಿದ್ದ ವೇಳೆಯೇ ನಡೆಯಿತು ಬೆಂಕಿ ಅವಘಡ

ಮುಂದಿನ ಸುದ್ದಿ
Show comments