Webdunia - Bharat's app for daily news and videos

Install App

ಎರಡು ಬಾರಿ ವಾಹನ ಬದಲಾವಣೆ, ಸ್ಕ್ರೀನ್ ಅಳವಡಿಸಿದ ವಾಹನದಲ್ಲಿ ದರ್ಶನ್ ಶಿಫ್ಟ್

Krishnaveni K
ಗುರುವಾರ, 29 ಆಗಸ್ಟ್ 2024 (09:09 IST)
ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಆರೋಪದ ಹಿನ್ನಲೆಯಲ್ಲಿ ನಟ ದರ್ಶನ್ ರನ್ನು ಇಂದು ಬೆಳಗ್ಗೆಯೇ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ಇದೀಗ ಪರಪ್ಪನ ಅಗ್ರಹಾರದಿಂದ ಅನಂತಪುರ ಮಾರ್ಗವಾಗಿ ಬಳ್ಳಾರಿಗೆ ಬರುತ್ತಿದ್ದಾರೆ.

ಸುಮಾರು 10 ಗಂಟೆಗೆ ಬಳ್ಳಾರಿ ಸೆಂಟ್ರಲ್ ಜೈಲ್ ಗೆ ದರ್ಶನ್ ತಲುಪುವ ನಿರೀಕ್ಷೆಯಿದೆ. ಮೂರು ಪೊಲೀಸ್ ವಾಹನಗಳ ಭದ್ರತೆಯಲ್ಲಿ ದರ್ಶನ್ ರನ್ನು ಶಿಫ್ಟ್ ಮಾಡಲಾಗುತ್ತಿದೆ. ಭದ್ರತೆ ದೃಷ್ಟಿಯಿಂದ ಎರಡು ಬಾರಿ ದರ್ಶನ್ ರನ್ನು ಬೇರೆ ಬೇರೆ ವಾಹನಕ್ಕೆ ವರ್ಗಾಯಿಸಲಾಗಿದೆ.

ಅಲ್ಲದೆ, ದರ್ಶನ್ ಇರುವುದು ಯಾರಿಗೂ ಗೊತ್ತಾಗಬಾರದು ಎಂಬ ಕಾರಣದಿಂದ ವಾಹನಕ್ಕೆ ಸ್ಕ್ರೀನ್ ಅಳವಡಿಸಿ ಕವರ್ ಮಾಡಲಾಗಿದೆ. ಬಾಗೇಪಲ್ಲಿ, ಅನಂತಪುರ ಮಾರ್ಗವಾಗಿ ಬಳ್ಳಾರಿಗೆ ತೆರಳುತ್ತಿದ್ದಾರೆ. ಭದ್ರತೆ ದೃಷ್ಟಿಯಿಂದ ಬೇರೊಂದು ಮಾರ್ಗದಿಂದ ದರ್ಶನ್ ರನ್ನು ಕರೆತರಲಾಗುತ್ತಿದೆ.

ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ದರ್ಶನ್ ರನ್ನು ಪರಪ್ಪನ ಅಗ್ರಹಾರದಿಂದ ಕರೆದೊಯ್ಯಲಾಗಿದೆ. ದರ್ಶನ್ ಎಂಟ್ರಿ ಹಿನ್ನಲೆಯಲ್ಲಿ ಬಳ್ಳಾರಿ ರಸ್ತೆಗಳಲ್ಲಿ ಭದ್ರತೆ ಒದಗಿಸಲಾಗಿದೆ. ಸೆಂಟ್ರಲ್ ಜೈಲ್ ಸಮೀಪ ಸುಮಾರು 50 ಮಂದಿ ಪೊಲೀಸರು ಜಮಾಯಿಸಿದ್ದಾರೆ. ಇಲ್ಲಿ ಅಭಿಮಾನಿಗಳು ಜಮಾಯಿಸುವ ಸಾಧ್ಯತೆಯಿರುವುದರಿಂದ ತೊಂದರೆಯಾಗದಂತೆ ಪೊಲೀಸರು ಸೇರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments