Select Your Language

Notifications

webdunia
webdunia
webdunia
webdunia

ಕಡತಗಳ ಹಿಡಿದು ಗೃಹಸಚಿವರ ಭೇಟಿಯಾದ ದರ್ಶನ್ ಬಂಧಿಸಿದ ಎಸಿಪಿ ಚಂದನ್

ACP Chandan

Krishnaveni K

ಬೆಂಗಳೂರು , ಶನಿವಾರ, 31 ಆಗಸ್ಟ್ 2024 (11:39 IST)
ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಆಂಡ್ ಗ್ಯಾಂಗ್ ಲಾಕ್ ಮಾಡಿದ ಖ್ಯಾತಿಯ ಎಸಿಪಿ ಚಂದನ್ ಇಂದು ಬೆಳ್ಳಂ ಬೆಳಿಗ್ಗೆಯೇ ಗೃಹಸಚಿವ ಜಿ ಪರಮೇಶ್ವರ್ ಅವರನ್ನು ಭೇಟಿಯಾಗಿದ್ದಾರೆ.

ದರ್ಶನ್ ಬಂಧಿಸಿ ಪೊಲೀಸ್ ಇಲಾಖೆಯಲ್ಲಿ ಹೀರೋ ಆಗಿದ್ದ ಎಸಿಪಿ ಚಂದನ್ ಇಂದು ಕಡತಗಳ ಕಟ್ಟು ಹಿಡಿದುಕೊಂಡು ಗೃಹಸಚಿವರ ಬಳಿ ಬಂದಿದ್ದಾರೆ. ಇದು ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದ ಕೇಸ್ ಫೈಲ್ ಆಗಿರಬಹುದು ಎನ್ನಲಾಗಿದೆ. ರೇಣುಕಾಸ್ವಾಮಿ ಪ್ರಕರಣ ಯಾವ ಹಂತ ತಲುಪಿದೆ ಎಂಬ ವಿಚಾರವಾಗಿ ಗೃಹಸಚಿವರಿಗೆ ವರದಿ ನೀಡಿದ್ದಾರೆ ಎನ್ನಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೆಲವೇ ಕೆಲವು ಪ್ರಕರಣಗಳ ವರದಿ ಬರಬೇಕಿದೆ. ಅದಾದ ಬಳಿಕ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದ್ದಾರೆ. ಈಗಾಗಲೇ ಸುಮಾರು 4,000 ಪುಟಗಳ ಚಾರ್ಜ್ ಶೀಟ್ ತಯಾರಾಗಿದೆ. ಇನ್ನುಳಿದ ಸಾಕ್ಷಿಗಳ ವಿವರ ಕಲೆ ಹಾಕಿ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.

ಇದಕ್ಕೆ ಮೊದಲು ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯ ಹೊಣೆ ಹೊತ್ತಿರುವ ಎಸಿಪಿ ಚಂದನ್ ಗೃಹಸಚಿವರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸದ್ಯಕ್ಕೆ ದರ್ಶನ್ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದರೆ, ಇನ್ನಿತರ ಆರೋಪಿಗಳೂ ವಿವಿಧ ಜೈಲುಗಳಲ್ಲಿ ಕಂಬಿ ಎಣಿಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮುಡಾ ಹಗರಣ ಗದ್ದಲ ಮಾಡುತ್ತಿರುವ ಬಿಜೆಪಿಗೆ ಕೊವಿಡ್ ಶಾಕ್ ಕೊಡಲು ಮುಂದಾದ ಸರ್ಕಾರ