Webdunia - Bharat's app for daily news and videos

Install App

ಮೈಸೂರು ದಸರಾ ಸಿಎಂ ಸಿಟಿ ರೌಂಡ್ಸ್

Webdunia
ಸೋಮವಾರ, 26 ಸೆಪ್ಟಂಬರ್ 2022 (15:53 IST)
ದಸರಾ ಅಂಗವಾಗಿ ನಗರದಲ್ಲಿ ಮಾಡಿರುವ ವಿದ್ಯುತ್‌ ದೀಪಾಲಂಕಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ ಮತ್ತು ಇಂಧನ ಸಚಿವ ಸುನೀಲ್‌ಕುಮಾರ್‌ ಭಾನುವಾರ ಮಧ್ಯರಾತ್ರಿವರೆಗೂ ವೀಕ್ಷಿಸಿದರು.
ರಾತ್ರಿ 10.30ರ ಸುಮಾರಿಗೆ ನಗರ ಪ್ರದಕ್ಷಿಣೆ ಆರಂಭಿಸಿದ ಅವರು, ರ‍್ಯಾಡಿಷನ್ ಬ್ಲೂ ಹೋಟೆಲ್‌ನಿಂದ ಕೆಎಸ್‌ಆರ್‌ಟಿಸಿಯ ಎರಡು ವೋಲ್ವೋ ಬಸ್ ಮೂಲಕ ಜೆಎಸ್‌ಎಸ್‌ ಮಹಾವಿದ್ಯಾಪೀಠ ವೃತ್ತಕ್ಕೆ ಬಂದರು. ಅಲ್ಲಿಂದ ಪ್ರವಾಸೋದ್ಯಮ ನಿಗಮದ 'ಅಂಬಾರಿ' ಡಬ್ಬಲ್ ಡೆಕ್ಕರ್ ಬಸ್‌ನಲ್ಲಿ ಸಂಚರಿಸಿದರು. ಆಕರ್ಷಕ ವಿದ್ಯುತ್‌ ದೀಪಾಲಂಕಾರವನ್ನು ಕಣ್ತುಂಬಿಕೊಂಡರು. ಅವರೊಂದಿಗೆ ಪಕ್ಷದ ಮುಖಂಡರು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು.
 
ಹಾರ್ಡಿಂಗ್‌ ವೃತ್ತ- ಜಯಚಾಮರಾಜೇಂದ್ರ ಒಡೆಯರ್ ವೃತ್ತ-ಕೆ.ಆರ್.ವೃತ್ತ-ಸಯ್ಯಾಜಿರಾವ್‌ ರಸ್ತೆ ಮೂಲಕ ಹೈವೇ ವೃತ್ತದವರೆಗೆ ಸಾಗಿ ಆಯುರ್ವೇದ ಆಸ್ಪತ್ರೆ- ರೈಲು ನಿಲ್ದಾಣ- ಮೆಟ್ರೊಪೋಲ್‌ ವೃತ್ತ- ಹುಣಸೂರು ರಸ್ತೆ- ಸ್ಕೌಟ್ಸ್ ಅಂಡ್ ಗೈಡ್ಸ್ ಮೈದಾನದ ಎದುರಿನ ರಸ್ತೆ ಮೂಲಕ ಚಾಮರಾಜ ಜೋಡಿ ರಸ್ತೆ ಮೂಲಕ ಜೆಎಸ್‌ಎಸ್‌ ಮಹಾವಿದ್ಯಾಪೀಠದವರೆಗೆ ದೀಪಾಲಂಕಾರವನ್ನು ವೀಕ್ಷಿಸಿದರು. 12.10ರ ಸುಮಾರಿಗೆ 'ದೀಪಾಲಂಕಾರ ವೀಕ್ಷಣೆ ರೌಂಡ್ಸ್‌' ಮುಗಿಸಿದರು. ಮಾರ್ಗದಲ್ಲಿ ಎದುರಾದ ಸಾರ್ವಜನಿಕರಿಗೆ ಕೈಬೀಸುತ್ತಾ ಸಾಗಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments