Select Your Language

Notifications

webdunia
webdunia
webdunia
webdunia

ದಶಪಥ ಹೆದ್ದಾರಿ ಕ್ರೆಡಿಟ್ ನಮ್ಮ ಸರ್ಕಾರಕ್ಕೇ ಸಲ್ಲಬೇಕು : ಪ್ರತಾಪ್ ಸಿಂಹ

ದಶಪಥ ಹೆದ್ದಾರಿ ಕ್ರೆಡಿಟ್ ನಮ್ಮ ಸರ್ಕಾರಕ್ಕೇ ಸಲ್ಲಬೇಕು : ಪ್ರತಾಪ್ ಸಿಂಹ
ಮೈಸೂರು , ಸೋಮವಾರ, 6 ಮಾರ್ಚ್ 2023 (12:21 IST)
ಮೈಸೂರು : ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಕ್ರೆಡಿಟ್ ನಮ್ಮ ಸರ್ಕಾರಕ್ಕೇ ಸಲ್ಲಬೇಕು ಎಂದು ಸಂಸದ ಪ್ರತಾಪ್ ಸಿಂಹಗೆ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟರು.
 
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಮಾರ್ಚ್ 9ರಂದು ಬೆಂಗಳೂರು-ಮೈಸೂರು ಹೆದ್ದಾರಿ ಪರಿಶೀಲನೆ ನಡೆಸುತ್ತೇನೆ. ಆ ರಸ್ತೆಯ ಕ್ರೆಡಿಟ್ ನಮ್ಮ ಸರ್ಕಾರಕ್ಕೇ ಸಲ್ಲಬೇಕು. ಪ್ರತಾಪ್ ಸಿಂಹ ಅವರದ್ದಾಗಲಿ, ಬಿಜೆಪಿ ಸರ್ಕಾರದ್ದಾಗಲಿ ಯಾವುದೇ ಪಾತ್ರ ಇಲ್ಲ.

ಪ್ರತಾಪ್ ಸಿಂಹ ಅವರ ಲೋಕಸಭಾ ವ್ಯಾಪ್ತಿಗೆ ಕೆಲವು ಕಿಲೋಮೀಟರ್ ರಸ್ತೆ ಮಾತ್ರ ಸೇರುತ್ತದೆ. ಆದರೂ ನಮ್ಮದು ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಹೆಚ್.ಸಿ.ಮಹದೇವಪ್ಪನವರಿಗೆ ಈ ರಸ್ತೆಯ ಎಲ್ಲಾ ಮಾಹಿತಿಯೂ ಗೊತ್ತಿದೆ. ಮಹದೇವಪ್ಪನವರು ಮುಂದೆ ನಿಂತು ಈ ರಸ್ತೆಯನ್ನು ಮಾಡಿಸಿದರು ಎಂದರು. 

ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣ ಕುರಿತು ಮಾತನಾಡಿ, ಅವರನ್ನು ಸರ್ಕಾರವೇ ರಕ್ಷಣೆ ಮಾಡುತ್ತಿದೆ. ವಿರೂಪಾಕ್ಷಪ್ಪನವರು ಎಲ್ಲಿದ್ದಾರೆ ಎಂಬುವುದು ಸರ್ಕಾರಕ್ಕೆ ಗೊತ್ತಿದೆ. ವಿರೂಪಾಕ್ಷಪ್ಪ ತಮ್ಮ ಮನೆಯಲ್ಲಿಯೇ ಓಡಾಡಿಕೊಂಡಿದ್ದಾರೆ. ಅವರನ್ನು ಬಂಧಿಸದೆ ಇವರು ನಾಟಕ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

 

Share this Story:

Follow Webdunia kannada

ಮುಂದಿನ ಸುದ್ದಿ

ಅಧ್ಯಕ್ಷ ಗ್ರೆಗ್ ಟಾಂಬ್ ವಜಾಗೊಳಿಸಿದ ಜೂಮ್ ಕಂಪನಿ?