Publish Date: Sun, 12 Nov 2023 (21:05 IST)
Updated Date: Sun, 12 Nov 2023 (20:08 IST)
ಗ್ಯಾರಂಟಿ ಯೋಜನೆಗಳ ಬಗ್ಗೆ ಕುಮಾರಸ್ವಾಮಿ ಆರೋಪ ವಿಚಾರವಾಗಿ ನಗರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಕುಮಾರಸ್ವಾಮಿಗೂ ಗ್ಯಾರಂಟಿಗಳಿಗೆ ಏನು ಸಂಬಂಧ?ಕುಮಾರಸ್ವಾಮಿಗೆ ಏನು ಗೋತ್ತಿದೆ ನಮ್ಮ ಗ್ಯಾರಂಟಿ ಬಗ್ಗೆ ಅವರೇನು ಫಲಾನುಭವಿನಾ..?ಅವರ ಪಂಚರತ್ನ ಯೋಜನೆ ಇಂಪ್ಲಿಮೆಂಟ್ ಮಾಡಲು ಆಗಲಿಲ್ಲ.ಜನರಿಗೆ ತಲುಪಿದೇಯೋ ಇಲ್ಲ ಅಂತ ಮತದಾರರ ಕೇಳಬೇಕು.
ನಾನು ಚನ್ನಪಟ್ಟಣ ಮತದಾರರ ಜೊತೆ ನಾನೇ ಮಾತನಾಡಿದ್ದೇನೆ.ಅವರನ್ನು ಕೇಳಿದ್ರೆ ಕುಮಾರಸ್ವಾಮಿಗೆ ಗೊತ್ತಾಗುತ್ತೆ.೫% ಮಾತ್ರ ಗೃಹಲಕ್ಷ್ಮೀ ತೊಂದರೆ ಆಗಿದೆ.ಪಾಪ ಅವರು ಮಾತನಾಡುತ್ತಿದ್ದಾರೆ ಮಾತನಾಡಲಿ.ಬಡವರು, ಹೆಣ್ಣುಮಕ್ಕಳ ನೋವು ಗೋತ್ತಿಲ್ಲ.ಖುಷಿಯಿಂದ ಹಬ್ಬ ಆಚರಣೆ ಮಾಡುತ್ತಿದ್ದಾರೆದಸರಾಗೆ ಬಂದಿದ್ದ ಜನರು ನೋಡಿದ್ರೆ ಗೋತ್ತಾಗುತ್ತೆ.ಕುಮಾರಸ್ವಾಮಿ ಬಹಳ ಅರ್ಜೆಂಟ್ ಅಲ್ಲಿ ಇದ್ದಾರೆ.ಸುಮ್ಮನೆ ಸಚಿವರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮೇಲೆ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.