ಇವಿಎಂ ಹ್ಯಾಕ್ ಆಗಿರುವ ಅನುಮಾನವಿದೆ ಎಂದ ಡಿಸಿಎಂ

Webdunia
ಸೋಮವಾರ, 20 ಮೇ 2019 (13:36 IST)
ಚುನಾವಣೋತ್ತರ ಸಮೀಕ್ಷೆ ಬಿಡುಗಡೆಗೊಂಡ ಬೆನ್ನಲ್ಲೇ ಕಾಂಗ್ರೆಸ್ ಸಮೀಕ್ಷೆ ವಿರುದ್ಧವೇ ತಿರುಗಿ ಬಿದ್ದಿದೆ.

ಬಿಜೆಪಿ ಪರವಾದ ಫಲಿತಾಂಶ ಸಮೀಕ್ಷೆ ಅವರೇ ಹೇಳಿ ಮಾಡಿಸಿದ ರೀತಿ ವರದಿ ಇದೆ.‌ ಆದರೆ ವಸ್ತು ಸ್ಥಿತಿಯಲ್ಲಿ ಬಿಜೆಪಿ ಸೋಲಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದ್ದಾರೆ.

ಸದಾಶಿವನಗರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, 300-400 ಸೀಟು ಬರುತ್ತೆ ಎಂದು ಎಕ್ಸಿಟ್‌ ಪೋಲ್ ಮೂಲಕ ಹೇಳಿಸಿಕೊಂಡು ಬಿಜೆಪಿ ಸಮಾಧಾನ ಪಟ್ಟುಕೊಳ್ಳುವ ಕೆಲಸ ಮಾಡುತ್ತಿದೆ.

ವಾಸ್ತವದಲ್ಲಿ ಯುಪಿಎ ಸರಕಾರ ಅಧಿಕಾರಕ್ಕೆ ಬರಲಿದೆ ಎಂಬ ಮಾಹಿತಿ ಸಿಕ್ಕಿದೆ. ನೆನ್ನೆ ದೆಹಲಿಯಲ್ಲಿ ನಾಯಕರನ್ನು ಭೇಟಿ ಮಾಡಿದಾಗಲೂ ಇದೇ ಅಭಿಪ್ರಾಯ ಕೇಳಿ ಬಂದಿದೆ.

ಕರ್ನಾಟಕದಲ್ಲಿ 18 ಸೀಟು ಬಿಜೆಪಿಗೆ ಬರಲಿದೆ ಎಂಬ ವರದಿಯನ್ನು ನಂಬಲಾದರೂ ಸಾಧ್ಯವೇ? ಎಂದರು.

ಈ ಬಾರಿ ಸಮೀಕ್ಷಾ ವರದಿ ಸಂಪೂರ್ಣ ತಪ್ಪಿದೆ. ಅದರಲ್ಲೂ ಕರ್ನಾಟಕದ ಸ್ಥಿತಿ ಗೊತ್ತಿದೆ. ಜೆಡಿಎಸ್‌ - ಕಾಂಗ್ರೆಸ್ ಪಕ್ಷವೇ ಹೆಚ್ಚು ಸ್ಥಾನ ಗಳಿಸಲಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದ್ರು.

ಇವಿಎಂ ಬೇಡ, ಬ್ಯಾಲೆಟ್ ಪೇಪರ್‌ ತರುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಇವಿಎಂ ಹ್ಯಾಕ್ ಮಾಡುವ ಸಾಧ್ಯತೆಯ ಬಗ್ಗೆ ಉದಾಹರಣೆ ನೋಡಿದ್ದೇವೆ.‌ ಆ ಅನುಮಾನವೂ ಮೂಡಿದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಯ ಮೇಲೆ ಪೆಲೆಟ್ ಗನ್, ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ

Video: ಹಳಿ ಮೇಲೆ ಬಂದ ಈ ಅತಿಥಿಗಳಿಗಾಗಿ ಟ್ರೈನ್ ನಿಲ್ಲಿಸಿದ ಲೋಕೋ ಪೈಲೆಟ್

ಶಿವಾಜಿನಗರದಲ್ಲಿ ಹಲ್ಲೆಗೊಳಗಾದ ಅಧಿಕಾರಿಗಳನ್ನು ಭೇಟಿಯಾಗಿ ಕೃಷ್ಣ ಭೈರೇಗೌಡ ನಡೆದುಕೊಂಡ ರೀತಿಗೆ ಮೆಚ್ಚುಗೆ

ಸಿಇಟಿ ಹಗರಣಕ್ಕೆ ಧರ್ಮೇಂದ್ರ ಪ್ರಧಾನ್ ತಲೆದಂಡಕ್ಕೆ ಪ್ರತಿಪಕ್ಷಗಳ ಪಟ್ಟು: ಲೋಕಸಭೆ ಕಲಾಪ ಸೋಮವಾರಕ್ಕೆ

ಶಾಸಕಿ ಅಂದ್ರೆ ಹೀಗಿರ್ಬೇಕು.. ಅಧಿಕಾರಿಯನ್ನು ಸಾರ್ವಜನಿಕವಾಗಿ ಕಾಲರ್ ಪಟ್ಟಿ ಹಿಡಿದು ದರ ದರನೆ ಎಳೆದು ತಂದ ಶಾಸಕಿ Video

ಮುಂದಿನ ಸುದ್ದಿ
Show comments