ಮಂಡ್ಯದಲ್ಲಿ ಡಿ. ಡಿ. ಹುದ್ದೆಗೆ ಪೈಪೋಟಿ

Webdunia
ಗುರುವಾರ, 22 ಸೆಪ್ಟಂಬರ್ 2022 (16:25 IST)
ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಹುದ್ದೆಗೆ ಇಬ್ಬರು ಅಧಿಕಾರಿಗಳ ನೇಮಕವಾಗಿರುವುದು ಪೈಪೋಟಿ ಜತೆಗೆ ಗೊಂದಲಕ್ಕೆ ಕಾರಣವಾಗಿದೆ.
ಡಿಡಿಪಿಯು ಹುದ್ದೆಗೆ ಉಮೇಶ್ ಹಾಗೂ ಮಂಜುನಾಥ್ ಪ್ರಸನ್ನ ಎಂಬುವರನ್ನು ನೇಮಕ ಮಾಡಲಾಗಿದೆ.
ಕಚೇರಿಯಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರದಿಂದಲೇ ಪರಿಹಾರ ಸಿಗಬೇಕಿದ್ದು, ಅಲ್ಲಿಯವರೆಗೂ ಗೊಂದಲ ಮುಂದುವರೆಯಲಿದೆ.
ಉಮೇಶ್ ಅವರು ಡಿಡಿಪಿಯು ಹುದ್ದೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ ಸೆ.5ರಂದು ಇವರನ್ನು ಕೊಪ್ಪಳಕ್ಕೆ ವರ್ಗಾವಣೆ ಮಾಡಲಾಗಿತ್ತು. ತೆರವಾಗಿದ್ದ ಜಾಗಕ್ಕೆ ಬೆಂಗಳೂರಿನ ಪಿಯು ಬೋರ್ಡ್‌ನ ಡಿಡಿ ಮಂಜುನಾಥ ಪ್ರಸನ್ನ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಇದರನ್ವಯ ಮಂಡ್ಯಕ್ಕೆ ಬಂದು ಅಧಿಕಾರವನ್ನು ಸ್ವೀಕಾರ ಮಾಡಿದ್ದರು.
ಈ ನಡುವೆ ವರ್ಗಾವಣೆ ವಿರುದ್ಧ ಉಮೇಶ್ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ ಮೆಟ್ಟಿಲೇರಿದ್ದರು. ಎರಡು ವರ್ಷಕ್ಕೆ ಮುನ್ನವೇ ಅಂದರೆ ಅವಧಿ ಪೂರ್ವವೇ ತನ್ನನ್ನು ವರ್ಗಾವಣೆ ಮಾಡಿದ್ದು, ಆದೇಶವನ್ನು ರದ್ದುಪಡಿಸುವಂತೆ ಮನವಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿರುವ ಮಂಡಳಿ ಮಂಡ್ಯ ಡಿಡಿ ಹುದ್ದೆಯಲ್ಲಿಯೇ ಮುಂದುವರೆಯುವಂತೆ ಉಮೇಶ್ ಅವರ ಪರವಾಗಿ ಸೆ.19ರಂದು ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಅವರು ಕೂಡ ಮತ್ತೆ ವಾಪಸ್ ಬಂದಿದ್ದಾರೆ. ಇಬ್ಬರಿಗೂ ಆದೇಶವಿರುವುದರಿಂದ ಕಚೇರಿಯಲ್ಲಿ ಪ್ರತ್ಯೇಕ ಕುರ್ಚಿಗಳನ್ನು ಹಾಕಿಕೊಂಡು ಕೆಲಸ ಮಾಡುತ್ತಿದ್ದಾರೆ. ಸರ್ಕಾರದ ಮುಂದಿನ ಆದೇಶದ ಬಳಿಕ ಯಾರಿಗೆ ಗೇಟ್‌ಪಾಸ್ ಸಿಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments