Webdunia - Bharat's app for daily news and videos

Install App

ಪ್ರತಿಯೊಬ್ಬ ಕನ್ನಡಿಗನ ಮೇಲೆ ₹1 ಲಕ್ಷ ಸಾಲದ ಹೊರೆ: ಇದು ಸಿದ್ದರಾಮಯ್ಯ ಸರ್ಕಾರದ ಸಾಧನೆ ಎಂದ ಬಿಜೆಪಿ

Sampriya
ಮಂಗಳವಾರ, 4 ಫೆಬ್ರವರಿ 2025 (18:04 IST)
Photo Courtesy X
ಬೆಂಗಳೂರು:  ಪ್ರಸ್ತುತ ಕರ್ನಾಟಕದ ಸಾಲ ₹6.65 ಲಕ್ಷ ಕೋಟಿಗೆ ತಲುಪಿದೆ. ಪ್ರತಿ ಕನ್ನಡಿಗನ ಮೇಲೆ ಬರೋಬ್ಬರಿ ₹1 ಲಕ್ಷ ಸಾಲದ ಹೊರೆಯನ್ನು ಭ್ರಷ್ಟ ಕಾಂಗ್ರೆಸ್‌ ಸರ್ಕಾರ ಹೊರಿಸಿದೆ ಎಂದು ಬಿಜೆಪಿ ಕಿಡಿಕಾರಿದೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ, ಕರ್ನಾಟಕವನ್ನು ಸಂಪೂರ್ಣ ದಿವಾಳಿ ಮಾಡಬೇಕೆಂಬುದೇ ಕಾಂಗ್ರೆಸ್‌ ಸರ್ಕಾರದ ಒನ್‌ ಲೈನ್‌ ಅಜೆಂಡಾವಾಗಿದೆ ಎಂದು ಅವರು ಕಿಡಿಕಾರಿದ್ದಾರೆ.

ಸಾಲ ಮಾಡುವುದನ್ನೇ ಫುಲ್‌ ಟೈಂ ಕಾಯಕವನ್ನಾಗಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಸ್ತುತ ಕರ್ನಾಟಕದ ಒಟ್ಟು ಸಾಲವನ್ನು ₹6 ಲಕ್ಷ 65 ಸಾವಿರ ಕೋಟಿಗೆ ಮುಟ್ಟಿಸಿದ್ದಾರೆ. ಪ್ರತಿ ಕನ್ನಡಿಗನ ಮೇಲೆ ಬರೋಬ್ಬರಿ ₹1 ಲಕ್ಷ ಸಾಲದ ಹೊರೆಯನ್ನು ಭ್ರಷ್ಟ ಕಾಂಗ್ರೆಸ್‌ ಸರ್ಕಾರ ಹೊರಿಸಿದೆ ಎಂದು ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ನಾವೀನ್ಯತೆಯ ಸೂಚ್ಯಂಕದಲ್ಲಿ, ಬಂಡವಾಳ ಹೂಡಿಕೆಯಲ್ಲಿ ನಂಬರ್‌ 1 ಆಗಿತ್ತು. ಆದರೆ, ಈಗಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಅತಿ ಹೆಚ್ಚು ಸಾಲ ಮಾಡುವ ರಾಜ್ಯಗಳಲ್ಲಿ ನಂಬರ್‌ 1 ಆಗುತ್ತಿರುವುದು ಅತ್ಯಂತ ನಾಚಿಕೆಗೇಡು ಎಂದು ಅವರು ಟೀಕಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹೆಸರನ್ನು ಸಾಲರಾಮಯ್ಯ ಎಂದು ಬದಲಿಸಿಕೊಳ್ಳುವುದು ಒಳಿತು. ಅವರು ಸಿಎಂ ಆದಾಗೆಲ್ಲಾ ಕರ್ನಾಟಕದ ಸಾಲ ರಾಕೆಟ್‌ ವೇಗದಲ್ಲಿ ವೃದ್ಧಿಯಾಗುತ್ತಿದೆ. ಪ್ರಸ್ತುತ ಕರ್ನಾಟಕದ ಸಾಲ ₹6.65 ಲಕ್ಷ ಕೋಟಿಗೆ ತಲುಪಿದ್ದು, ಭ್ರಷ್ಟ ಕಾಂಗ್ರೆಸ್‌ ಸರ್ಕಾರದ ಆಡಳಿತ ಹೀಗೆಯೇ ಮುಂದುವರೆದರೆ ₹12 ಲಕ್ಷ ಕೋಟಿಗೆ ತಲುಪಿದರೂ ಅಚ್ಚರಿಯಿಲ್ಲ ಎಂದು ಕಿಡಿಕಾರಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

ಮುಂದಿನ ಸುದ್ದಿ
Show comments