Webdunia - Bharat's app for daily news and videos

Install App

ಹಿಟ್ & ರನ್‌ಗೆ ಡೆಲಿವರಿ ಬಾಯ್ ಸಾವು

Webdunia
ಬುಧವಾರ, 21 ಜೂನ್ 2023 (15:58 IST)
ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಡೆಡ್ಲಿ ಹಿಟ್​ ಅಂಡ್​ ರನ್​ ಪ್ರಕರಣ ಬೆಳಕಿಗೆ ಬಂದಿದೆ. ಕುಡಿದ ಮತ್ತಿನಲ್ಲಿ ಜಾಲಿ ರೈಡ್​ ಹೊರಟ ಯುವಕ-ಯುವತಿಯರು ಅಮಾಯಕನ ಪ್ರಾಣವನ್ನು ತೆಗೆದೇ ಬಿಟ್ಟಿದ್ದಾರೆ. ಅತಿ ವೇಗದ ಮೋಜಿನ ಹುಚ್ಚಾಟಕ್ಕೆ ಕುಟುಂಬದ ಆಧಾರವಾಗಿದ್ದ ವ್ಯಕ್ತಿಯೊಬ್ಬನನ್ನು ಬಲಿ ಪಡೆದಿದ್ದಾರೆ. ಅಪಘಾತಕ್ಕೀಡಾದ ವ್ಯಕ್ತಿ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದರೂ ಆತನನ್ನು ಆಸ್ಪತ್ರೆಗೆ ದಾಖಲಿಸದೇ ಅಲ್ಲಿಯೇ ಬಿಟ್ಟು ಪರಾರಿಯಾಗುವ ಮೂಲಕ ಮೃಗಗಳಿಗಿಂತಲೂ ಕಡೆಯಾಗಿ ವರ್ತಿಸಿದ್ದಾರೆ. ಆದರೆ, ತಾನೊಂದು ಬಗೆದರೆ ದೈವವೊಂದು ಬಗೆಯುತ್ತದೆ ಎಂಬ ಮಾತಿನಂತೆ ಮಾನವೀಯತೆ ಮರೆತು ಪರಾರಿ ಆಗುತ್ತಿದ್ದ ಲಜ್ಜಗೆಟ್ಟವರನ್ನು ಹಿಡಿದು ಸ್ಥಳೀಯರು ಹಿಗ್ಗಾಮುಗ್ಗ ಥಳಿಸಿದ್ದಾರೆ. ಹಿಟ್ ಅಂಡ್ ರನ್​ಗೆ ಬಲಿಯಾದ ವ್ಯಕ್ತಿಯನ್ನು ಜೊಮ್ಯಾಟೋ ಡೆಲಿವರಿ ಬಾಯ್ ಪವನ್ ಕುಮಾರ್​ ಎಂದು ಗುರುತಿಸಲಾಗಿದೆ. ಈತ ಎಚ್.ಡಿ.ಕೋಟೆ ಮೂಲದವನು. ಪವನ್​ ಸವಾರಿ ಮಾಡುತ್ತಿದ್ದ ಬೈಕ್​ಗೆ ಕಾರು ಗುದ್ದಿ ಸುಮಾರು 100 ಮೀಟರ್ ಎಳೆದೊಯ್ದಿದೆ. ರಕ್ತದ ಮಡುವಿನಲ್ಲೇ ಒದ್ದಾಡಿ ಪವನ್​ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಅಪಘಾತದ ಬೆನ್ನಲ್ಲೇ ಕಾರು ಚಾಲಕ ಬಿಟ್ಟು ಕಾರಲ್ಲಿದ್ದ ನಾಲ್ವರು ಅಲ್ಲಿಂದ ಎಸ್ಕೇಪ್ ಆಗಿದ್ದು, ಕಾರು ಚಾಲಕ ವಿನಾಯಕ್​ನನ್ನು ಬ್ಯಾಟರಾಯನಪುರ ಟ್ರಾಫಿಕ್ ಪೊಲೀಸರ ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಮುಂದಿನ ಸುದ್ದಿ
Show comments