ವ್ಯವಸ್ಥೆ ಬದಲಾಗದಿದ್ರೆ ಪ್ರಜಾಪ್ರಭುತ್ವ ದುರ್ಬಲವಾಗುತ್ತೆ : ಸಿದ್ದರಾಮಯ್ಯ

Webdunia
ಗುರುವಾರ, 31 ಮಾರ್ಚ್ 2022 (07:39 IST)
ಬೆಂಗಳೂರು : ಚುನಾವಣಾ ವ್ಯವಸ್ಥೆ ಬದಲಾಗಬೇಕು ಎಂಬುದರಲ್ಲಿ ಎರಡು ಮಾತಿಲ್ಲ.

ಇದರ ಸುಧಾರಣೆಯಾಗದೆ ಹೋದರೆ ಪ್ರಜಾಪ್ರಭುತ್ವ ದುರ್ಬಲವಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಚುನಾವಣಾ ಸುಧಾರಣೆಗಳ ಬಗ್ಗೆ ಇಂದಿನ ಅಧಿವೇಶನದಲ್ಲಿ ಮಾತನಾಡಿ ಅವರು, ಪ್ರಜಾಪ್ರಭುತ್ವ ದುರ್ಬಲವಾದರೆ ಸಮಾಜ, ದೇಶ ದುರ್ಬಲವಾಗುತ್ತದೆ.

ಎಪ್ಪತ್ತರ ದಶಕದಿಂದ ಈಚೆಗೆ ಚುನಾವಣಾ ವ್ಯವಸ್ಥೆ ಕೆಡಲು ಆರಂಭವಾಯಿತು ಎಂದು ಸಭಾದ್ಯಕ್ಷರು ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ಹೇಳಿದ್ದಾರೆ. ಚುನಾವಣಾ ವ್ಯವಸ್ಥೆ ಒಂದು ಚುನಾವಣೆಯಿಂದ ಮತ್ತೊಂದು ಚುನಾವಣೆಗೆ ಬಲಿಷ್ಠವಾಗುತ್ತಾ ಹೋಗಬೇಕಿತ್ತು.

ಆದರೆ ನಮ್ಮಲ್ಲಿ ದುರ್ಬಲವಾಗುತ್ತಾ ಹೋಗುತ್ತಿದೆ ಎಂಬ ಒಟ್ಟು ಅಭಿಪ್ರಾಯ ಸದನದಲ್ಲಿ ವ್ಯಕ್ತವಾಗಿದೆ. ಇದು ಅತ್ಯಂತ ಕಳವಳದ ಸಂಗತಿಯಾಗಿದೆ ಎಂದರು. 

1971ರಿಂದ ನಾನು ರಾಜಕೀಯದಲ್ಲಿ ಭಾಗವಹಿಸಲು ಆರಂಭಿಸಿದೆ. ಆ ಸಂದರ್ಭದಲ್ಲಿ ನಾನು ಕಾನೂನು ಕಾಲೇಜಿನಲ್ಲಿ ಓದುತ್ತಿದ್ದೆ ಮತ್ತು ವಿದ್ಯಾರ್ಥಿ ಸಂಘಟನೆಯ ಮುಖಂಡನಾಗಿದ್ದೆ. ಆಗಿನ ಸಂಸತ್ ಚುನಾವಣೆಯಲ್ಲಿ ಹುಣಸೂರಿನ ಡಾ. ಹೆಚ್.ಎಲ್.ತಿಮ್ಮೇಗೌಡರ ಸಂಸ್ಥಾ ಕಾಂಗ್ರೆನ್ನಿಂದ ಲೋಕಸಭೆಗೆ ಸ್ಪರ್ಧಿಸಿದ್ದರು.

ನಾನು ಆ ವೇಳೆಗೆ ಸಮಾಜವಾದಿ ಪಕ್ಷದ ಸದಸ್ಯನೂ ಆಗಿದ್ದೆ. ಸಮಾಜವಾದಿ ಪಕ್ಷದ ಅಭ್ಯರ್ಥಿ ಇಲ್ಲದಿರುವುದರಿಂದ ಸಂಸ್ಥಾ ಕಾಂಗ್ರೆಸ್ ಅನ್ನು ಬೆಂಬಲಿಸಿ ಎಂದು ಪ್ರೊ.ನಂಜುಂಡಸ್ವಾಮಿ ಅವರು ನಮಗೆ ಹೇಳಿದ್ದರು. ಹಾಗಾಗಿ ನಾನು ನಮ್ಮೂರು ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಪ್ರಚಾರಕ್ಕೆ ಹೋಗಿದ್ದೆ ಎಂದು ನೆನಪಿಸಿಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಯುಗಾದಿ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುತ್ತಾ: ಕೋಡಿಶ್ರೀಗಳ ಶಾಕಿಂಗ್ ಭವಿಷ್ಯ

ರೀಲ್ಸ್ ಗಾಗಿ ಪುಟಾಣಿ ಮಗುವಿಗೆ ಸಿಗರೇಟ್, ಬಿಯರ್ ಕೊಟ್ಟ ಯುವಕ: Video

ಮುಂದಿನ ಸುದ್ದಿ
Show comments