Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು- ಮೈಸೂರು ರಸ್ತೆಯಲ್ಲಿ ಪಾಲಿಕೆ ಅಧಿಕಾರಿಗಳು ಮಂಗಳವಾರ ಒತ್ತುವರಿ ತೆರವು ಕಾರ್ಯ ನಡೆಸಿದರು.
ಡಾ.ಬಿ.ಆರ್.ಅಂಬೇಡ್ಕರ್ ವೃತ್ತ (ಎಫ್ಟಿಎಸ್)ದ ಆಸುಪಾಸಿನಲ್ಲಿ ಪ್ರಾರ್ಥನಾ ಮಂದಿರಗಳು ಸೇರಿದಂತೆ ಕೆಲವರು ರಸ್ತೆಯನ್ನು ಒತ್ತುವರಿ ಮಾಡಿಕೊಂಡಿದ್ದ ಕುರಿತು ಈಚೆಗಷ್ಟೇ ನ್ಯಾಯಾಲಯವು ತೆರವುಗೊಳಿಸುವಂತೆ ಆದೇಶಿಸಿತ್ತು.ಕೆಲ ದಿನಗಳ ಹಿಂದೆ ಒತ್ತುವರಿ ತೆರವಿಗೆ ಹೋದಾಗ ಸ್ಥಳೀಯರು ಪ್ರತಿಭಟನೆ ನಡೆಸಿ, ತಡೆದಿದ್ದರು.
ಹೆಚ್ಚಿನ ಪೊಲೀಸರೊಂದಿಗೆ ಸ್ಥಳಕ್ಕೆ ತೆರಳಿದ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಒತ್ತುವರಿಯನ್ನು ತೆರವುಗೊಳಿಸಿದರು. ಈ ವೇಳೆ ಸ್ಥಳೀಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು