Webdunia - Bharat's app for daily news and videos

Install App

ಮಗ ಕೇಂದ್ರ ಸಚಿವನಾಗಿದ್ದಾನೆ, ಮೊಮ್ಮಗನನ್ನೂ ಶಾಸಕ ಮಾಡಿ: ಕೈ ಮುಗಿದು ಬೇಡಿದ ದೇವೇಗೌಡರು

Krishnaveni K
ಮಂಗಳವಾರ, 5 ನವೆಂಬರ್ 2024 (17:23 IST)
ಚನ್ನಪಟ್ಟಣ: ನನ್ನ ಮಗ ಕೇಂದ್ರ ಸಚಿವನಾಗಿದ್ದಾನೆ, ಈಗ ನನ್ನ ಮೊಮ್ಮಗನಿಗೂ ನೀವು ಆಶೀರ್ವಾದ ಮಾಡಿ ಶಾಸಕನಾಗಿ ಮಾಡಿ ಎಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರು ಕೈ ಮುಗಿದು ಮನವಿ ಮಾಡಿದ್ದಾರೆ.

ಚನ್ನಪಟ್ಟಣ ಬೈ ಎಲೆಕ್ಷನ್ ನಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ನಿಖಿಲ್ ಕುಮಾರಸ್ವಾಮಿ ಪರವಾಗಿ ಇಂದು ತಾತ ದೇವೇಗೌಡರು ಮತ ಯಾಚನೆ ಮಾಡಿದರು. ನಿನ್ನೆಯೇ ದೇವೇಗೌಡರು ಮತ ಯಾಚನೆಗೆ ಬರಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಯೋಜನೆ ಬದಲಾಯಿತು.

ನನ್ನ ಮೊಮ್ಮಗನಿಗೆ ಈ ಬಾರಿ ನೀವು ಆಶೀರ್ವಾದ ಮಾಡಿ ಗೆಲ್ಲಿಸಿ. ಅತ್ಯಂತ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿ ತರಬೇಕು. ನನ್ನ ಮಗ ಕುಮಾರಸ್ವಾಮಿ ಕೇಂದ್ರ ಮಂತ್ರಿಯಾಗಿದ್ದಾರೆ. ಮೊಮ್ಮಗ ನಿಖಿಲ್ ಗೂ ಶಾಸಕನಾಗಿ ಸೇವೆ ಸಲ್ಲಿಸಲು ಅವಕಾಶ ಕೊಡಿ ಎಂದು ದೇವೇಗೌಡರು ಕೈ ಮುಗಿದು ಕೇಳಿಕೊಂಡರು.

ಈ ವೇಳೆ ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಅವರು 60 ವರ್ಷದ ರಾಜಕಾರಣದಲ್ಲಿ ಇಂತಹ ಕೆಟ್ಟ ರಾಜಕಾರಣ ನಾನು ನೋಡಿಲ್ಲ. ಕಾಂಗ್ರೆಸ್ ನವರಿಗೆ ವಿರೋಧ ಪಕ್ಷದವರಿಗೆ ಹೇಗೆ ಗೌರವ ಕೊಡಬೇಕೆಂದೂ ಗೊತ್ತಿಲ್ಲ ಎಂದಿದ್ದಾರೆ. ಇಲ್ಲಿನ ರೈತರ ಸ್ಥಿತಿ ನೋಡಲು ಸಾಧ್ಯವಾಗುತ್ತಿಲ್ಲ. ನಮಗೇ ಕುಡಿಯಲು ನೀರಿಲ್ಲ. ಆದರೆ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments