ರಷ್ಯಾ ಉಕ್ರೇನ್ ಯುದ್ಧ ದೇವೇಗೌಡರ ಪತ್ರ

Webdunia
ಸೋಮವಾರ, 28 ಫೆಬ್ರವರಿ 2022 (16:51 IST)
ಯುದ್ಧ ಪೀಡಿತ ಉಕ್ರೇನ್ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳು ಹಾಗೂ ಭಾರತೀಯರನ್ನು ಆದಷ್ಟು ಬೇಗ ಸುರಕ್ಷಿತವಾಗಿ ಕರೆತರಲು ವಿದೇಶಾಂಗ ಸಚಿವಾಲಯಕ್ಕೆ ಸೂಚನೆ ನೀಡಬೇಕೆಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.
 
ಈ ಸಂಬಂಧ ಪ್ರಧಾನಿ ಅವರಿಗೆ ಪತ್ರ ಬರೆದಿರುವ ಗೌಡರು, ಯುದ್ಧ ನಡೆಯುತ್ತಿರುವ ಉಕ್ರೇನಲ್ಲಿ ಸಿಲುಕಿರುವ ಭಾರತೀಯರ ಯೋಗ ಕ್ಷೇಮಕ್ಕೆ ಸೂಕ್ತ ವ್ಯವಸ್ಥೆಗಳನ್ನು ಮಾಡುವಂತೆ ಕೋರಿದ್ದಾರೆ.ದಿನದಿಂದ ದಿನಕ್ಕೆ ಪರಿಸ್ಥಿತಿ ಬಿಗಡಾಯಿಸುತ್ತಿದ್ದು, ಕಷ್ಟಕರವಾದ ಪರಿಸ್ಥಿತಿ ಉಕ್ರೇನಲ್ಲಿ ಉಂಟಾಗಿದೆ
ಭಾರತೀಯ ನಾಗರಿಕರನ್ನು ತಾಯ್ನಾಡಿಗೆ ಕರೆತರಲಾಗುತ್ತದೆ ಎಂಬ ವಿಶ್ವಾಸವಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
 
ಭಾರತ ಸರ್ಕಾರವು ಈಗಾಗಲೇ ಉಕ್ರೇನಲ್ಲಿ ಸಿಲುಕಿರುವ ವಿದ್ಯಾರ್ಥಿಗಳು ಹಾಗೂ ನಾಗರಿಕರನ್ನು ಕರೆತರಲು ವಿಶೇಷ ಪ್ರಯತ್ನ ಮಾಡುತ್ತಿರುವುದು ಮೆಚ್ಚುವಂತಹ ವಿಚಾರ. ಕರ್ನಾಟಕ ಹಾಗೂ ಹಾಸನ ಜಿಲ್ಲೆಯ ಹಲವು ವಿದ್ಯಾರ್ಥಿಗಳು ಯುದ್ಧ ವಲಯದಲ್ಲಿ ಸಿಲುಕಿದ್ದಾರೆ.
 
ಅಂತಹವರ ಸುಮಾರು ಒಂದು ಡಜನ್ಗೂ ಹೆಚ್ಚು ವಿದ್ಯಾರ್ಥಿಗಳ ಪಟ್ಟಿಯನ್ನು ಪತ್ರದೊಂದಿಗೆ ನೀಡಿದ್ದು, ಅಲ್ಲಿಂದ ಸ್ಥಳಾಂತರ ಮಾಡಲು ಅನುಕೂಲವಾಗಬಹುದು ಎಂದು ಹೇಳಿದ್ದಾರೆ.
 
ರಷ್ಯಾ ದಾಳಿಯಿಂದಾಗಿ ಉಕ್ರೇನ್ನಲ್ಲಿ ತೀವ್ರಗತಿಯಲ್ಲಿ ಹದಗೆಡುತ್ತಿದೆ. ಅಂತಾರಾಷ್ಟ್ರೀಯ ಮಾಧ್ಯಮಗಳ ಮೂಲಕ ಈ ವಿಚಾರ ತಿಳಿಯುತ್ತಿದೆ. ಉಕ್ರೇನಲ್ಲಿ ನೆಲೆಸಿರುವ ಜನರಿಗೆ ತೀವ್ರ ತೊಂದರೆ ಹಾಗೂ ಅಪಾಯದ ಸನ್ನಿವೇಶದ ವಿಚಾರಗಳು ಕೇಳಿ ಬರುತ್ತಿವೆ. ನಾಗರಿಕ ಮತ್ತು ವಸತಿ ಪ್ರದೇಶಗಳಿಗೂ ಬಾಂಬ್ ದಾಳಿ ಮಾಡಲಾಗುತ್ತಿದೆ ಎಂಬ ಮಾಹಿತಿ ಇದೆ ಎಂದಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಪ್ರದೇಶದ ದೇವಸ್ಥಾನದಲ್ಲಿ ಅನ್ಯಕೋಮಿನ ಜೋಡಿಯ ಅಸಭ್ಯ ವರ್ತನೆ: ಕೊನೆಗೆ ಏನಾಯ್ತು ನೋಡಿ video

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಭಾನುವಾರ ರೆಡ್ ಅಲರ್ಟ್

ನನ್ನ ಮಗಳು ಮಿಡಲ್ ಫಿಂಗರ್ ತೋರಿಸಿಲ್ಲ, ಅವಳಿಗೆ ಗಾಯವಾಗಿತ್ತು ಎಂದ ಸಿಯಾ ಗೋಯಲ್ ತಂದೆ: ನೆಟ್ಟಿಗರ ಪ್ರತಿಕ್ರಿಯೆ ನೋಡಿ

ರಾಜ್ಯದಲ್ಲಿ ಎಸ್‍ಐಆರ್ ದುರ್ಬಳಕೆಗೆ ಕಾಂಗ್ರೆಸ್ ಕತ್ತೆಗಳೇ ಕಾರಣ: ವಿಜಯೇಂದ್ರ

ಪತ್ನಿ, ಮಕ್ಕಳ ಮೇಲೆ ಹಲ್ಲೆ ನಡೆಸಿ ಸ್ವತಃ ತಾನೇ ಮನೆಗೆ ಬೆಂಕಿ ಹಚ್ಚಿಕೊಂಡು ಪರಾರಿಯಾದ ಉದ್ಯಮಿ Video

ಮುಂದಿನ ಸುದ್ದಿ
Show comments