Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬಳ್ಳಾರಿ : ಕಾಂಗ್ರೆಸ್ ನಾಯಕರಿಗಿಂತ ಹೆಚ್ಚು, ಬಿಜೆಪಿ ನಾಯಕರೇ ನನಗೆ ತೊಂದರೆ ಕೊಡುತ್ತಿದ್ದಾರೆ.
ನನ್ನ ರಾಜಕೀಯ ಜೀವನ ಮುಂದೆ ಹೇಗಿರುತ್ತೆ, ಅದು ನನಗೆ ಗೊತಿಲ್ಲ. ನಾನು ಬೆಳೆಸಿದ ಪಕ್ಷದವರು ನನಗೆ ಸಾಕಷ್ಟು ಕಷ್ಟ ಕೊಡುತ್ತಿದ್ದಾರೆ. ಕಾಂಗ್ರೆಸ್ನವರು ಕಷ್ಟ ಕೊಟ್ಟಿದ್ದಾರೆ.
ಆದ್ರೆ ಬಿಜೆಪಿ ಅವರು ನನಗೆ ಸಾಕಷ್ಟು ಕಷ್ಟ ಕೊಡುತ್ತಿದ್ದಾರೆ ಎಂದು ಗಾಲಿ ಜನಾರ್ದನ ರೆಡ್ಡಿ ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಗಣಿ ನಾಡಿನಲ್ಲಿ ರಾಜಕೀಯ ದಿನೇ ದಿನೇ ರಂಗೇರುತ್ತಿದೆ. ಒಂದು ಕಾಲದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿ ಅಧಿಕಾರಕ್ಕೆ ತಂದ ರೆಡ್ಡಿಗಾರು ಇಂದು ಬಿಜೆಪಿ ವಿರುದ್ಧವೇ ಕಿಡಿ ಕಾರುವ ಮೂಲಕ ಬಿಜೆಪಿಗೆ ಮುಜುಗರ ತಂದಿದ್ದಾರೆ.