Webdunia - Bharat's app for daily news and videos

Install App

ಬಡವರ ಕಾರ್ಯಕ್ರಮಕ್ಕೆ ಕೇಂದ್ರದಿಂದ ತೊಂದರೆ : ಸಿದ್ದರಾಮಯ್ಯ

Webdunia
ಸೋಮವಾರ, 26 ಜೂನ್ 2023 (12:41 IST)
ಬಡವರ ಕಾರ್ಯಕ್ರಮಗಳಿಗೆ ತೊಂದರೆ ಕೊಡಬೇಕೆಂದು ಕೇಂದ್ರ ಸರ್ಕಾರ ಅಕ್ಕಿ ಕೊಡಲು ನಿರಾಕರಿಸಿದೆ. ಅವರ ಬಳಿ ಲಕ್ಷ ಟನ್ಗಟ್ಟಲೆ ಅಕ್ಕಿ ಇದೆ.

ಅದನ್ನ ಖಾಸಗಿಯವರಿಗೆ ಹರಾಜು ಮಾಡ್ತಿದ್ದಾರೆ ಹೊರತು ರಾಜ್ಯಗಳಿಗೆ ಕೊಡುತ್ತಿಲ್ಲ. ಪ್ರತಿ ಕೆಜಿ ಅಕ್ಕಿಗೆ 36.70 ರೂ. ಕೊಡಲು ಒಪ್ಪಿದರೂ ಅಕ್ಕಿ ಕೊಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

5 ಗ್ಯಾರಂಟಿ ಯೋಜನೆಗಳ ಪೈಕಿ ಈಗಾಗಲೇ ಒಂದು ಯೋಜನೆಗೆ ಚಾಲನೆ ನೀಡಲಾಗಿದೆ. ಜುಲೈ 1ರಿಂದ ಉಚಿತ ವಿದ್ಯುತ್ ಯೋಜನೆ ಜಾರಿಗೆ ಬರಲಿದೆ. ಅಕ್ಕಿಯನ್ನೂ ನೀಡಬೇಕೆಂಬ ಉದ್ದೇಶವಿದ್ದರೂ ಅಕ್ಕಿ ದೊರೆಯುತ್ತಿಲ್ಲ. ದೊರೆತರೂ ಹೆಚ್ಚಿನ ದರ ಕೇಳುತ್ತಾರೆ. 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಎಲ್ಲಿಯೂ ಸಿಗುತ್ತಿಲ್ಲ.

ಎಲ್ಲ ರಾಜ್ಯದವರಿಂದಲೂ ಪೂರ್ಣಪ್ರಮಾಣದ ಅಕ್ಕಿ ದೊರೆಯುತ್ತಿಲ್ಲವಾದ್ದರಿಂದ ಬೇರೆ ಸರ್ಕಾರಿ ಏಜೆನ್ಸಿಗಳಿಂದ ಎನ್ಸಿಸಿಎಫ್ ನಿಂದ ಕೇಂದ್ರೀಯ ಭಂಡಾರ್, ನ್ಯಾಫೆಡ್ ಸಂಸ್ಥೆಗಳಿಂದ ದರಪಟ್ಟಿ ಕರೆಯಲಾಗಿದ್ದು, ಮಾತುಕತೆ ನಡೆದಿದೆ. ಈ ಬಗ್ಗೆ ಮಾತುಕತೆ ನಡೆಸಿ ಎಷ್ಟು ಅಕ್ಕಿ? ದರ ಎಷ್ಟು? ಎನ್ನುವ ಬಗ್ಗೆ ತೀರ್ಮಾನ ಮಾಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments