ಆದೇಶ ಉಲ್ಲಂಘಿಸಿದವರಿಗೆ ದಂಡಾಸ್ತ್ರ

Webdunia
ಗುರುವಾರ, 3 ಆಗಸ್ಟ್ 2023 (19:00 IST)
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಆಗುತ್ತಿರುವ ಅಪಘಾತಗಳನ್ನ ತಡೆಯಲು ನಿನ್ನೆಯಿಂದ ಬೈಕ್, ಆಟೋ, ಟ್ರ್ಯಾಕ್ಟರ್ ಮತ್ತು ಮಲ್ಟಿ ಆ್ಯಕ್ಸೆಲ್ ವಾಹನಗಳಿಗೆ ನಿಷೇಧ ಹೇರಿದೆ. ಆದರೂ ಕೋಣನ ಮುಂದೆ ಕಿನ್ನರಿ ಬಾರಿಸಿ ಏನು ಪ್ರಯೋಜನ ಎಂಬಂತೆ ನಿನ್ನೆಯಿಂದಲೇ ದ್ವಿಚಕ್ರ ವಾಹನ ಸವಾರರು ನಿಯಮ ಉಲ್ಲಂಘಿಸಿ ಸಂಚಾರ ಮಾಡುತ್ತಿದ್ದಾರೆ. ಆದ್ದರಿಂದ ಆದೇಶ ಉಲ್ಲಂಘಿಸಿ ದಶಪಥ ಹೆದ್ದಾರಿಯಲ್ಲಿ ಸಂಚಾರ ಮಾಡಿದ ಬೈಕ್ ಸವಾರರಿಗೆ ಪೊಲೀಸರು ದಂಡ ವಿಧಿಸಿದ್ದಾರೆ.

ಮದ್ದೂರು ಪೊಲೀಸರು ನಿನ್ನೆ ಒಂದೇ ದಿನ 20 ಸಾವಿರಕ್ಕೂ ಹೆಚ್ಚು ದಂಡ ವಸೂಲಿ ಮಾಡಿದ್ದಾರೆ. ದ್ವಿಚಕ್ರ ವಾಹನ ಸವಾರರಿಗೆ ಮದ್ದೂರು ಪೊಲೀಸರು, ಎಷ್ಟೇ ಹೇಳಿದರೂ ದಶಪಥ ಹೆದ್ದಾರಿಯಲ್ಲಿ ಸಂಚರಿಸಿದ್ದಾರೆ. ಆದ್ದರಿಂದ ಪೊಲೀಸರು ಮದ್ದೂರು ತಾಲೂಕಿನ ಗಡಿಭಾಗ ನಿಡಘಟ್ಟ ಬಳಿ ಆದೇಶ ಧಿಕ್ಕರಿಸಿದ 40 ದ್ವಿಚಕ್ರ ವಾಹನ ಹಾಗೂ ಒಂದು ಟ್ರಾಕ್ಟರ್​ಗೆ ತಲಾ 500 ರೂಪಾಯಿಯಂತೆ ದಂಡ ವಿಧಿಸಿದ್ದಾರೆ. ಕೆಲ ವಾಹನಗಳಿಗೆ ನಿಷೇಧ ಹೇರಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಎಕ್ಸ್​ಪ್ರೆಸ್ ರಸ್ತೆಗಾಗಿ ನಮ್ಮ ಜಮೀನು ಕೊಟ್ಟಿದ್ದೇವೆ. ನಮಗೂ ಇಂತಹ ರಸ್ತೆಯಲ್ಲಿ ಓಡಾಡಬೇಕು ಅಂತ ಆಸೆ ಇದೆ. ಬೈಕ್​ಗಳಿಗೂ ಅವಕಾಶ ಮಾಡಬೇಕು ಎಂದು ವಾಹನ ಸವಾರರು ಮತ್ತು ಸ್ಥಳೀಯರು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿ ಯೋಗ್ಯ ಚಿಕಿತ್ಸೆ ಕೊಡಿಸಿ: ಸಿ.ಟಿ. ರವಿ

ಸನಾತನ ಧರ್ಮವೆಂದರೆ ಡೆಂಘಿ, ಕೊರೋನಾ ಇದ್ದಂತೆ ಎಂದಿದ್ದ ಉದಯನಿಧಿ ಸ್ಟಾಲಿನ್ ರಿಂದ ಟೆಂಪಲ್ ರನ್ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಇರಾನ್, ಅಮೆರಿಕಾ ಕದನ ವಿರಾಮದಲ್ಲಿ ಪಾಕಿಸ್ತಾನ ಪಾತ್ರ: ವಿಶ್ವಗುರು ಎನ್ನುವ ಮೋದಿ ಫೇಲ್ ಎಂದ ಜೈ ರಾಂ ರಮೇಶ್

ಮುಂದಿನ ಸುದ್ದಿ
Show comments