ನಿರಂತರ ಮಳೆಗೆ ಅಸ್ತವ್ಯಸ್ತ ಜನಜೀವನ

Webdunia
ಗುರುವಾರ, 20 ಸೆಪ್ಟಂಬರ್ 2018 (17:01 IST)
ಉತ್ತರ ಕರ್ನಾಟಕದಲ್ಲಿ ಮಳೆಯ ಅಭಾವ ಜನಜೀವನವನ್ನ ಅಸ್ತವ್ಯಸ್ತಗೊಳಿಸಿದೆ. ಮುದ್ರಣ ಕಾಶಿ ಗದಗ ಜಿಲ್ಲೆಯ ಹಲವೆಡೆ ನಿರಂತರ ಎರಡು ಗಂಟೆಗಳ ಕಾಲ ಸುರಿದ ಭಾರೀ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. 

ಗದಗ ನಗರದ ಬೆಟಗೇರಿಯ ವಾಂಬೆ ನಗರದಲ್ಲಿ ಮಳೆ ನೀರಿನ ಅವಾಂತರಕ್ಕೆ ಜನತೆ ಕಂಗಾಲಾಗಿದ್ದಾರೆ. ಮನೆಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ಜನರು ಪರದಾಡ್ತಿದಾರೆ. ಮಳೆರಾಯನ ಅವಾಂತರಕ್ಕೆ ರಾತ್ರಿ ಇಡಿ ವಾಂಬೆ ನಗರದ ಜನತೆ ಜಾಗರಣೆ ಮಾಡಿದ್ದಾರೆ. ಅಲ್ಲದೇ ಗದಗ ನಗರದ ಹಳೇ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ರಸ್ತೆಯ ಮೇಲೆ ಚರಂಡಿ ನೀರು ಹರಿದು ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಗಂಗಿಮಡಿ, ಬೆಟಗೇರಿಯ ಯಡಿಯೂರು ಸಿದ್ದಲಿಂಗೇಶ್ವರ ಕಾಲೋನಿ, ಉಸಕಿನಕಟ್ಟಿಯಲ್ಲಿ ಮಳೆಯಿಂದಾಗಿ ಹಲವು ಮನೆಗಳಿಗೆ ನೀರು ನುಗ್ಗಿ ಜನ ಪರದಾಡುವಂತಾಗಿದೆ.

ಇನ್ನು ಜಿಲ್ಲೆಯ ಹಲವೆಡೆ ಭಾರೀ ಮಳೆ ಹಿನ್ನೆಲೆ ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿದೆ. ಗದಗ-ಬೆಟಗೇರಿ ನಗರಸಭೆ ಕೈಗೊಂಡಿರೋ ರಸ್ತೆ ಕಾಮಗಾರಿ ಹಾಗೂ ಒಳಚರಂಡಿ ಕಾಮಗಾರಿಗಳು ಕಳಪೆ ಮಟ್ಟ ಮತ್ತು ಅಪೂರ್ಣಗೊಂಡಿದ್ದೇ ಈ ಎಲ್ಲ ಅನಾಹುತಗಳಿಗೆ ಕಾರಣ ಎಂದು ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕೂಡಲೇ ಮಳೆಯಿಂದ ಉಂಟಾಗುವ ಸಮಸ್ಯೆಗಳನ್ನು ಸರಿಪಡಿಸಬೇಕೆಂದು ನಗರಸಭೆ ಅಧಿಕಾರಿಗಳಿಗೆ ಸ್ಥಳೀಯರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಗದಗ ಶಾಸಕ ಹೆಚ್. ಕೆ. ಪಾಟೀಲ್  ಭೇಟಿ ನೀಡಿ ಜನರ ಕುಂದು ಕೊರತೆ ಆಲಿಸಿದ್ದಾರೆ. ಇಷ್ಟು ದಿನ ಇಲ್ಲದ ಮಳೆಯ ಅಬ್ಬರ ಮೂರು ದಿನಗಳಿಂದ ಪ್ರತಾಪ ತೋರುತ್ತಿದ್ದು ನಿವಾಸಿಗಳಿಗೆ ತೊಂದರೆ ಉಂಟು ಮಾಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಪರಿಷ್ಕರಣೆ ಮಾಡ್ತಿರೋದು ಸರೀನಾ ಎಂದಿದ್ದಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ನಿಂಗೆ ನೋವಾದ್ರೆ ನಂಗೂ ನೋವಾಗುತ್ತೆ... ಪಾಲಕಿಗೆ ಗಾಯವಾಗಿದ್ದಕ್ಕೆ ಆನೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Viral

NEET ಪರೀಕ್ಷೆ 2026: ಸಿದ್ಧತೆ, ನಿಯಮಗಳು ಮತ್ತು ಪ್ರಮುಖ ವಿವರಗಳು ಇಲ್ಲಿದೆ

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಮನೆಗೇ ಬಂದು ಅಧಿಕಾರಿಗಳು ಕೇಳುವ ಈ 10 ಪ್ರಶ್ನೆಗಳಿಗೆ ಸಿದ್ಧರಾಗಿ

Karnataka weather: ವಾರಂತ್ಯದಲ್ಲಿ ರಾಜ್ಯದಲ್ಲಿ ಮಳೆಯಿರಲಿದೆಯೇ, ಇಲ್ಲಿದೆ ವರದಿ

ಮುಂದಿನ ಸುದ್ದಿ
Show comments