ಬಿಸಿಲೂರಿಗೆ ಜಿಲ್ಲಾಡಳಿತ ಜಾರಿಗೊಳಿಸಿದ ನೋಟೀಸ್ ಏನು ಗೊತ್ತಾ?

Webdunia
ಶುಕ್ರವಾರ, 23 ನವೆಂಬರ್ 2018 (15:45 IST)
ಬಿಸಿಲೂರಿಗೆ ಜಿಲ್ಲಾಡಳಿತ ಖಡಕ್ ನೋಟೀಸ್ ಜಾರಿಮಾಡಿದೆ.
ಬಿಸಿಲೂರು ಗ್ರಾಮ ಪಂಚಾಯಿತಿಯ ತೆರಿಗೆ ಸಂಗ್ರಹದಲ್ಲಿ ಕೊರತೆ ಉಂಟಾಗುತ್ತಿದ್ದು, ಕರ ವಸೂಲಿಗಾರರು ತಿಂಗಳ ಅಂತ್ಯದಲ್ಲಿ ಬಾಕಿಯಿರುವ ತೆರಿಗೆ ಸಂಗ್ರಹಿಸುವಂತೆ ಜಿಲ್ಲಾಡಳಿತ ನೋಟಿಸ್ ಜಾರಿ ಮಾಡಿದೆ.

ಮನೆ, ನೀರು ಸೇರಿ ವಿವಿಧ ರೀತಿಯ ತೆರಿಗೆಗಳನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರ ವಸೂಲಿಗಾರರು ತಿಂಗಳೊಳಗಗೆ ಸಂಗ್ರಹಿಸಬೇಕು. ಇಲ್ಲವಾದರೆ ಸೇವೆಯಿಂದ ವಜಾಗೊಳಿಸುವ ಖಡಕ್ ಎಚ್ಚರಿಕೆಯನ್ನೂ ಜಿಪಂ ಸಿಇಒ ನೀಡಿದ್ದಾರೆ ಎನ್ನಲಾಗಿದೆ.
ರಾಯಚೂರು ಜಿಲ್ಲೆಯಲ್ಲಿ 179 ಗ್ರಾ.ಪಂ.ಗಳಿದ್ದು, ವಾರ್ಷಿಕ 20.15 ಕೋಟಿ ತೆರಿಗೆ ಸಂಗ್ರಹದ ಗುರಿಯಿದೆ. ಆದರೆ ಕಳೆದ ಸಾಲಿನಲ್ಲಿ ಕೇವಲ 1.49 ಕೋಟಿ ರೂ. ಮಾತ್ರ ಸಂಗ್ರಹಿಸಲಾಗಿದೆ. ಅಂದರೆ ಶೇ 7.40ರಷ್ಟು ಮಾತ್ರ ತೆರಿಗೆ ಸಂಗ್ರಹವಾಗಿದೆ. ಸಮರ್ಪಕವಾಗಿ ಹಣ ಸಂಗ್ರಹವಾಗದ ಕಾರಣ ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆ ಉಂಟಾಗುತ್ತಿದೆ ಎಂದು ಆರೋಪಿಸಲಾಗಿದೆ.  

ಸರ್ಕಾರ ಗ್ರಾ.ಪಂ.ಗಳ ಜನಸಂಖ್ಯೆ ಆಧಾರದ ಮೇಲೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಪ್ರತಿ ವರ್ಷ 10ರಿಂದ 35 ಲಕ್ಷ ರೂ.ವರೆಗೂ ಅನುದಾನ ನೀಡುತ್ತಿದೆ. ಉಳಿದಂತೆ ತೆರಿಗೆ ರೂಪದಲ್ಲಿ ಸಂಗ್ರಹಿಸಿದ ಹಣದಿಂದಲೇ ಅಭಿವೃದ್ಧಿ ಕಾರ್ಯಗಳು ನಡೆಯಬೇಕು. ಗ್ರಂಥಾಲಯ, ಆರೋಗ್ಯ, ಮನೆ, ನೀರು ಸೇರಿದಂತೆ ಶೇ.33ರಷ್ಟು ತೆರಿಗೆ ಹಣವನ್ನು ಸರ್ಕಾರಕ್ಕೆ ಪಾವತಿಸಿದರೆ, ಉಳಿದ ಶೇ.67ರಷ್ಟು ತೆರಿಗೆ ಹಣವನ್ನು ಸಿಬ್ಬಂದಿ ವೇತನ, ಅಭಿವೃದ್ಧಿ ಕಾರ್ಯಗಳಿಗೆ ಬಳಸಿಕೊಳ್ಳಬೇಕು.

ಆದರೆ ಕರ ವಸೂಲಿಯಲ್ಲಿ ನಿರೀಕ್ಷಿತ ಮಟ್ಟ ತಲುಪದ ಕಾರಣ ಅಭಿವೃದ್ಧಿ ಹಾಗೂ ಆಡಳಿತ ನಿರ್ವಹಣೆ ಕಷ್ಟಕರವಾಗಿದೆ. 
2014ರಲ್ಲಿಯೂ ಕರ ವಸೂಲಿಗಾರರಿಗೆ ಹೀಗೆ ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ ಸುಧಾರಣೆ ಕಂಡಿರಲಿಲ್ಲ. ಈಗ ಪುನಃ ಅದೇ ಕ್ರಮ ಕೈಗೊಳ್ಳಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ಹೈಕಮಾಂಡ್ ಗೆ ಎದುರಾಗಿದೆ ಮೂರು ಸವಾಲು

Karnataka Weather: ಕರ್ನಾಟಕದಲ್ಲಿ ಇಂದು ಈ ಜಿಲ್ಲೆಗೆ ಮಳೆಯ ಸಾಧ್ಯತೆ

ಶಿವಮೊಗ್ಗದಲ್ಲಿ ವಿದ್ಯಾರ್ಥಿ ಮರ್ಡರ್: ಕುಟುಂಬಸ್ಥರಿಗೆ 15 ಲಕ್ಷ ಪರಿಹಾರ, ಯಾರನ್ನೂ ಬಿಡಲ್ಲ ಎಂದ ಸಿಎಂ

ನೇಮಕಾತಿಗಾಗಿ ಪ್ರತಿಭಟನೆ ಮಾಡಿದ್ದ ಯುವಕರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಅಸ್ತಿತ್ವಕ್ಕೆ ಪೆಟ್ಟು ಬಿದ್ದಾಗ ದಲಿತ ಸಿಎಂ ಪ್ರಸ್ತಾಪ: ಪಿ.ರಾಜೀವ್

ಮುಂದಿನ ಸುದ್ದಿ
Show comments