Webdunia - Bharat's app for daily news and videos

Install App

ಊಟ ಮಾಡೋದಕ್ಕೂ ರಾಜಕೀಯಕ್ಕೂ ಏನ್ರೀ ಸಂಬಂಧ: ಡಿಕೆ ಶಿವಕುಮಾರ್ ಸಿಟ್ಟೋ ಸಿಟ್ಟು

Krishnaveni K
ಸೋಮವಾರ, 6 ಜನವರಿ 2025 (16:59 IST)
ದೆಹಲಿ: ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
 
ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. 
 
ನಿಮ್ಮ ವಿದೇಶಿ ಪ್ರವಾಸದ ವೇಳೆಯಲ್ಲೇ ರಾಜ್ಯದಲ್ಲಿ ಡಿನ್ನರ್ ರಾಜಕೀಯ ನಡೆದಿದೆಯೇ ಎಂದು ಕೇಳಿದಾಗ, “ಮಾಧ್ಯಮದವರು ಔತಣಕೂಟಕ್ಕೆ ಏಕೆ ರಾಜಕಾರಣ ಬೆರೆಸುತ್ತೀರಿ? ಇದಕ್ಕೆ ಇಲ್ಲಸಲ್ಲದ ಅರ್ಥವನ್ನು ಏಕೆ ಕಲ್ಪಿಸುತ್ತೀರಿ? ನಾನು ಕಳೆದ ನಾಲ್ಕೈದು ವರ್ಷಗಳಿಂದ ಕುಟುಂಬದವರ ಜೊತೆ ಎಲ್ಲಿಯೂ ಹೋಗಿರಲಿಲ್ಲ. ಆದ ಕಾರಣಕ್ಕೆ ವಿದೇಶಿ ಪ್ರವಾಸಕ್ಕೆ ತೆರಳಿದ್ದೆ” ಎಂದರು.
 
ಡಿಸಿಎಂ ಅವರ ಅನುಪಸ್ಥಿತಿಯಲ್ಲಿ ಔತಣಕೂಟ ಸಭೆ ನಡೆದಿದೆ ಎಂದು ಕೇಳಿದಾಗ, “ಅನೇಕ ಮಂತ್ರಿಗಳು ಸಹ ಕುಟುಂಬದವರ ಜೊತೆ ವಿದೇಶಿ ಪ್ರವಾಸ ಹೋಗಿದ್ದರು. ಬೆಂಗಳೂರಿನಲ್ಲಿ ಇದ್ದವರು ಒಂದು ಸಂಜೆ ಒಟ್ಟಿಗೆ ಸೇರಿದ್ದಾರೆ. ಇದರಲ್ಲಿ ತಪ್ಪೇನಿದೆ?” ಎಂದರು.
 
ಕ್ಯಾಬಿನೆಟ್ ಪುನರ್ ರಚನೆಯಾಗಬೇಕು ಎಂದು ಎಚ್.ಕೆ.ಪಾಟೀಲ್ ಅವರು ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಮಾತುಗಳು ಕೇಳಿಬರುತ್ತಿವೆ ಎಂದಾಗ, “ಯಾವ ಚರ್ಚೆಯೂ ನಡೆದಿಲ್ಲ. ಮಾಧ್ಯಮದವರಿಗೆ ಯಾರೋ ತಪ್ಪು ಮಾಹಿತಿ ನೀಡಿ, ನಿಮಗೆ ಬಿಡುವು ಸಿಗದಂತೆ ನೋಡಿಕೊಳ್ಳುತ್ತಿದ್ದಾರೆ. ಇದು ಮಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಇದರ ಬಗ್ಗೆ ಮಾತನಾಡುತ್ತಾರೆ” ಎಂದರು.
 
ರಾಜ್ಯದಲ್ಲಿ ಎಂಟು ತಿಂಗಳ ಮಗುವಿನಲ್ಲಿ ಎಚ್ ಎಂವಿ ವೈರಸ್ ಪತ್ತೆಯಾಗಿರುವ ಬಗ್ಗೆ ಕೇಳಿದಾಗ, “ಈಗಾಗಲೇ ನಮ್ಮ ಆರೋಗ್ಯ ಸಚಿವರು ಕೆಲಸ ಮಾಡುತ್ತಿದ್ದಾರೆ. ಯಾರೂ ಸಹ ಆತಂಕಪಡುವ ಅವಶ್ಯಕತೆಯಿಲ್ಲ. ಸರ್ಕಾರ ಎಚ್ಚರಿಕೆಯಿಂದ ಕೆಲಸ ಮಾಡುತ್ತಿದೆ" ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments