Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ನೆರೆಯಿರುವಾಗ ನಿಮಗೆ ಪ್ರಿಯಾಂಕ ವಾದ್ರಾ ಸ್ವಾಗತವೇ ಹೆಚ್ಚಾಯ್ತಾ: ಡಿಕೆಶಿ ವಿರುದ್ಧ ಆಕ್ರೋಶ

Krishnaveni K
ಬುಧವಾರ, 23 ಅಕ್ಟೋಬರ್ 2024 (08:52 IST)
ಬೆಂಗಳೂರು: ಒಂದೆಡೆ ಬೆಂಗಳೂರಿನಲ್ಲಿ ಮಳೆಯಿಂದ ಇಡೀ ನಗರವೇ ಪ್ರವಾಹ ಸದೃಶವಾಗಿದ್ದರೆ ಇತ್ತ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಪ್ರಿಯಾಂಕ ವಾದ್ರಾ ಸ್ವಾಗತಕ್ಕೆ ನಿಂತಿದ್ದು ನೆಟ್ಟಿಗರಿಂದ ಟೀಕೆಗೆ ಗುರಿಯಾಗಿದೆ.

ಬೆಂಗಳೂರಿನಲ್ಲಿ ನಿನ್ನೆ ಭಾರೀ ಮಳೆಯಿಂದಾಗಿ ಕಟ್ಟಡವೊಂದು ಕುಸಿತು ಸಾವು, ನೋವು ಸಂಭವಿಸಿತ್ತು. ಬಹುತೇಕ ಕಡೆ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಜನ ಸಂಕಷ್ಟದಲ್ಲಿರುವಾಗ ಜನರ ಕಷ್ಟ ಕೇಳಲು ಜನನಾಯಕರು ಮನೆ ಬಾಗಿಲಿಗೆ ಬರುತ್ತಾರೆಂಬ ನಿರೀಕ್ಷೆಯಲ್ಲಿದ್ದರು.

ಆದರೆ ಇದೇ ಸಂದರ್ಭದಲ್ಲಿ ವಯನಾಡಿನಲ್ಲಿ ಉಪಚುನಾವಣೆಗೆ ಸ್ಪರ್ಧಿಸುತ್ತಿರುವ ಪ್ರಿಯಾಂಕ ಗಾಂಧಿ ವಾದ್ರಾ, ಕಾಂಗ್ರೆಸ್ ಧುರೀಣೆ ಸೋನಿಯಾ ಗಾಂಧಿ ಮೈಸೂರಿಗೆ ಬಂದಿಳಿದಿದ್ದಾರೆ. ಇವರನ್ನು ಸ್ವಾಗತಿಸಲು ಸಿಎಂ, ಡಿಸಿಎಂ ಸೇರಿದಂತೆ ಇಡೀ ಕಾಂಗ್ರೆಸ್ ಸಚಿವ ಸಂಪುಟವೇ ಅಲ್ಲಿ ಹಾಜರಿತ್ತು.

ಇದು ನೆಟ್ಟಿಗರು ಆಕ್ರೋಶಕ್ಕೆ ಕಾರಣವಾಗಿದೆ. ಇಲ್ಲಿ ಜನ ಸಂಕಷ್ಟದಲ್ಲಿರುವಾಗ ನಿಮಗೆ ಪ್ರಿಯಾಂಕ ವಾದ್ರಾರನ್ನು ಸ್ವಾಗತಿಸುವುದೇ ಮುಖ್ಯವಾಯಿತೇ ಎಂದು ಸೋಷಿಯಲ್ ಮೀಡಿಯಾದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯರನ್ನು ಜನರು ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಮುಂದಿನ ಸುದ್ದಿ
Show comments