Select Your Language

Notifications

webdunia
webdunia
webdunia
webdunia

ಸಿಎಂ ಬದಲಾವಣೆ ವಿಚಾರ: ಡಿಕೆ ಶಿವಕುಮಾರ್ ಮಹತ್ವದ ತೀರ್ಮಾನ

DK Shivakumar
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮತ್ತೆ ಚರ್ಚೆಯಾಗುತ್ತಿದೆ. ಹೈಕಮಾಂಡ್ ಸದ್ಯದಲ್ಲೇ ಬುಲಾವ್ ನೀಡಲಿದೆ ಎಂಬ ಸುದ್ದಿಗಳ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಮಹತ್ವದ ತೀರ್ಮಾನ ತಿಳಿಸಿದ್ದಾರೆ.

ಮೇ 24 ರ ಬಳಿಕ ರಾಹುಲ್ ಗಾಂಧಿ ವಿದೇಶ ಪ್ರವಾಸ ಮಾಡಲಿದ್ದಾರೆ. ಹೀಗಾಗಿ ಇದಕ್ಕಿಂತ ಮೊದಲು ನಾಯಕತ್ವ ವಿವಾದ, ಸಂಪುಟ ಪುನರಾರಚನೆ ಬಗ್ಗೆ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ದೆಹಲಿಗೆ ಕರೆಸಿಕೊಂಡು ಮಾತುಕತೆ ನಡೆಸಲಿದೆ ಎಂಬ ಸುದ್ದಿಗಳಿವೆ.

ಇನ್ನೊಂದೆಡೆ ಸಿಎಂ ಸಿದ್ದರಾಮಮಯ್ಯ ಮತ್ತು ಡಿಕೆ ಶಿವಕುಮಾರ್ ಬಣದ ನಾಯಕರು ಸಭೆ ನಡೆಸುತ್ತಿದ್ದಾರೆ. ಇದರ ನಡುವೆ ಡಿಕೆ ಶಿವಕುಮಾರ್ ತಮ್ಮ ತೀರ್ಮಾನವೇನೆಂದು ಸ್ಪಷ್ಟವಾಗಿ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ನಾನಾಗಿಯೇ ದೆಹಲಿಗೆ ಹೋಗಲ್ಲ. ವರಿಷ್ಠರು ಕರೆದಾಗ ಹೋಗುತ್ತೇನೆ. ದೆಹಲಿಗೆ ಕರೆಯುವುದಾಗಿ ಹೇಳಿದ್ದಾರೆ. ಕರೆದಾಗ ಹೋಗುತ್ತೇನೆ ಮತ್ತು ವರಿಷ್ಠರನ್ನು ಏನು ಕೇಳಬೇಕೋ ಕೇಳುತ್ತೇನೆ’ ಎಂದು ತಮ್ಮ ನಿರ್ಧಾರ ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ಇಂದು ಭಾರೀ ಮಳೆ ನಿರೀಕ್ಷೆ