Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ಗೆ ಶೂ ಕಳ್ಳತನದ ಚಿಂತೆ, ಶೂ ಕಾಯಲು ಓರ್ವ ಭದ್ರತಾ ಸಿಬ್ಬಂದಿ

Krishnaveni K
ಶನಿವಾರ, 21 ಸೆಪ್ಟಂಬರ್ 2024 (14:25 IST)
ಚನ್ನಪಟ್ಟಣ: ಚನ್ನಪಟ್ಟಣದಲ್ಲಿ ಇಂದು ಅಭಿವೃದ್ಧಿ ಕಾರ್ಯಗಳ ಶಂಕು ಸ್ಥಾಪನೆಗೆ ಬಂದಿದ್ದ ಡಿಕೆ ಶಿವಕುಮಾರ್ ಗೆ ತಮ್ಮ ಶೂನದ್ದೇ ಚಿಂತೆಯಾಗಿದೆ. ಇದನ್ನು ಕಾಯಲು ಒಬ್ಬ ಭದ್ರತಾ ಸಿಬ್ಬಂದಿಯನ್ನಿಟ್ಟುಕೊಂಡಿದ್ದಾರೆ.

ಡಿಕೆ ಶಿವಕುಮಾರ್ ಎಲ್ಲೇ ಹೋದರೂ ಜನ ಅವರ ಬಳಿ ಮುತ್ತುವುದು ಸಹಜ. ಇಂದು ಚನ್ನಪಟ್ಟಣದಲ್ಲಿ ಶಂಕು ಸ್ಥಾಪನೆ ಕಾರ್ಯಕ್ರಮಕ್ಕೆ ಬಂದಿದ್ದಾಗಲೂ ಸಾಕಷ್ಟು ಜನ ಸೇರಿದ್ದರು. ಈ  ವೇಳೆ ಪುರೋಹಿತರು ಪೂಜೆ ಮಾಡುತ್ತಿದ್ದರು. ಈ ವೇಳೆ ಡಿಕೆಶಿ ತಮ್ಮ ಸಂಪುಟ ಸಹೋದ್ಯೋಗಿ ಜಮೀರ್ ಅಹ್ಮದ್ ಜೊತೆ ಬಂದಿದ್ದಾರೆ.

ಇಬ್ಬರೂ ಪೂಜೆಯಲ್ಲಿ ಪಾಲ್ಗೊಂಡಿದ್ದು ಬಳಿಕ ಶಂಕು ಸ್ಥಾಪನೆ ನೆರವೇರಿಸಿದರು. ಈ ವೇಳೆ ಸಾಕಷ್ಟು ಸಂಖ್ಯೆಯಲ್ಲಿ ಜನ ಸೇರಿದ್ದರು. ಪೂಜೆ ವೇಳೆ ಡಿಕೆಶಿ ತಮ್ಮ ಶೂ ಕಳಚಲೇ ಬೇಕಾಗಿತ್ತು. ಆದರೆ ಅವರಿಗೆ ಜನರ ನೂಕುನುಗ್ಗಲಿನ ನಡುವೆ ತಮ್ಮ ಶೂ ಎಲ್ಲಿ ಕಳೆದುಹೋಗುವುದೋ ಎಂಬ ಚಿಂತೆ.

ಈ ಕಾರಣಕ್ಕೆ ಪೂಜೆ ನಡೆಯುವ ಸ್ಥಳದಲ್ಲೇ ಒಂದು ಮೂಲೆಯಲ್ಲಿ ಶೂ ಕಳಚಿಟ್ಟ ಡಿಕೆ ಶಿವಕುಮಾರ್ ತಮ್ಮ  ಒಬ್ಬ ಭದ್ರತಾ ಸಿಬ್ಬಂದಿಯನ್ನು ಚಪ್ಪಲಿ ಕಾಯಲು ಅಲ್ಲೇ ನಿಲ್ಲಿಸಿದ್ದರು. ಆ ಭದ್ರತಾ ಸಿಬ್ಬಂದಿ ಆ ಚಪ್ಪಲಿಯನ್ನು ತನ್ನ ಕಾಲ ಮಧ್ಯೆಯೇ ಇಟ್ಟುಕೊಂಡು ಜೋಪಾನ ಮಾಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments