Select Your Language

Notifications

webdunia
webdunia
webdunia
webdunia

ಮೇ 15 ರೊಳಗೆ ಸಿಹಿ ಸುದ್ದಿ ಸಿಗುತ್ತಾ ಎಂದಿದ್ದಕ್ಕೆ ಡಿಕೆ ಶಿವಕುಮಾರ್ ಹೀಗೆ ಮಾಡೋದಾ

DK Shivakumar
ಬೆಂಗಳೂರು: ಮೇ 15 ರೊಳಗೆ ಹೈಕಮಾಂಡ್ ಸಿಹಿ ಸುದ್ದಿ ನೀಡುತ್ತದೆ ಎಂದು ನಾಯಕತ್ವ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ನ ಕೆಲವು ಶಾಸಕರ ಹೇಳಿಕೆ ಬಗ್ಗೆ ಡಿಕೆ ಶಿವಕುಮಾರ್ ಗೆ ಕೇಳಿದಾಗ ಏನು ಮಾಡಿದ್ರು ಗೊತ್ತಾ?

ಇಂದು ಮಾಧ್ಯಮಗಳೊಂದಿಗೆ ಮಾತನಾಡುವಾಗ ಡಿಕೆ ಶಿವಕುಮಾರ್ ಗೆ ಪತ್ರಕರ್ತರು ಮೇ 15 ರೊಳಗೆ ಸಿಹಿ ಸುದ್ದಿ ಸಿಗುತ್ತದೆ ಎಂದು ಕಾಂಗ್ರೆಸ್ ನ ಕೆಲವು ಶಾಸಕರು ಹೇಳಿದ್ದಾರೆ. ಇಕ್ಬಾಲ್ ಹುಸೇನ್ ಅವರು ಹೇಳಿದ್ದಾರೆ ಸಾರ್. ಇದು ನಿಜಾನಾ ಸಾರ್ ಎಂದು ಪ್ರಶ್ನೆ ಮಾಡಿದ್ದಾರೆ.

ಆದರೆ ಇದಕ್ಕೆ ಪ್ರತಿಕ್ರಿಯಿಸದ ಡಿಕೆ ಶಿವಕುಮಾರ್ ಕೇಳಿಯೂ ಕೇಳಿಸದವರಂತೆ ಮುಂದೆ ನಡೆದಿದ್ದಾರೆ. ಆದರೆ ಡಿಕೆಶಿ ಬೆಂಬಲಿಗ ಶಾಸಕರು ಮಾತ್ರ ಹೈಕಮಾಂಡ್ ತೀರ್ಮಾನವನ್ನು ಎದಿರು ನೋಡುತ್ತಿದ್ದಾರೆ. ಮೇ ಅಂತ್ಯದೊಳಗೆ ನಿಮಗೆ ನ್ಯಾಯ ಸಿಗುತ್ತದೆ ಎಂದು ಹೈಕಮಾಂಡ್ ಹೇಳಿರುವುದಾಗಿ ಶಾಸಕ ಅಶೋಕ್ ಪಟ್ಟಣ್ ತಿಳಿಸಿದ್ದಾರೆ.

ಸದ್ಯಕ್ಕೆ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದರೆ ಪಂಚ ರಾಜ್ಯ ಚುನಾವಣೆ ಫಲಿತಾಂಶದ ಬಳಿಕ ನಾಯಕತ್ವ ಬದಲಾವಣೆ ವಿಚಾರವಾಗಿ ಒಂದು ತೀರ್ಮಾನವಾಗುವುದು ಖಚಿತ ಎನ್ನಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಒಂದು ಗುಂಡಿ ಮುಚ್ಚಲು ರಾಜ್ಯ ಸರ್ಕಾರದಿಂದ ಒಂದು ಲಕ್ಷ ಖರ್ಚು: ಛಲವಾದಿ ನಾರಾಯಣಸ್ವಾಮಿ