ಸಿಎಂ ಬದಲಾವಣೆ ವಿಚಾರದಲ್ಲಿ ಸಿದ್ದರಾಮಯ್ಯಗೇ ಶಾಕ್ ಕೊಟ್ಟ ಡಿಕೆ ಶಿವಕುಮಾರ್

Krishnaveni K
ಬುಧವಾರ, 18 ಫೆಬ್ರವರಿ 2026 (09:46 IST)
ಬೆಂಗಳೂರು: ಸಿಎಂ ಬದಲಾವಣೆ ವಿಚಾರ ಚರ್ಚೆಯಲ್ಲಿರುವಾಗಲೇ ತಮ್ಮ ಒಂದು ಹೇಳಿಕೆಯಿಂದಲೇ ಸಿಎಂ ಸಿದ್ದರಾಮಯ್ಯಗೆ ಡಿಕೆ ಶಿವಕುಮಾರ್ ಶಾಕ್ ಕೊಟ್ಟಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಈಗ ಭಾರೀ ಸದ್ದು ಮಾಡುತ್ತಿದೆ. ಇದರ ನಡುವೆ ಕೆಲವು ಶಾಸಕರು ವಿದೇಶ ಪ್ರವಾಸ ಮಾಡಿದ್ದಾರೆ. ಇನ್ನು, ಸಿಎಂ ಆಪ್ತ ಬಳಗದಲ್ಲಿರುವ ಸಚಿವ ಮಹದೇವಪ್ಪ ಬಾಲವೇ ನಾಯಿಯನ್ನು ಅಲ್ಲಾಡಿಸಕ್ಕೆ ಆಗಲ್ಲ. ಎಲ್ಲವೂ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದಿದ್ದರು.

ಮಹದೇವಪ್ಪನಿಗೆ ನಾನು ಉತ್ತರ ಕೊಡಕ್ಕೆ ಹೋಗಲ್ಲ. ಯಾರಿಗೂ ಉತ್ತರ ಕೊಡಲ್ಲ. ನಾಯಕತ್ವ ಕುರಿತಂತೆ ಸಿಎಂ, ನಾನು ಮತ್ತು ಹೈಕಮಾಂಡ್ ಸೇರಿ ನಾವೆಲ್ಲಾ ತೆಗೆದುಕೊಂಡಿರೋ ತೀರ್ಮಾನ. ಆ ತೀರ್ಮಾನಕ್ಕೆ ಟೈಂ ಬಂದಾಗ ಉತ್ತರ ಸಿಗುತ್ತದೆ. ಇದೇನೂ ಕದ್ದುಮುಚ್ಚಿ ತೆಗೆದುಕೊಂಡಿರೋ ಗುಟ್ಟಿನ ತೀರ್ಮಾನ ಅಲ್ಲ. ಸಿಎಂ ಸಿದ್ದರಾಮಯ್ಯನವರೇ ಸಮಯ ಬಂದಾಗ ರಾಜ್ಯದ ಜನತೆಗೆ ಉತ್ತರ ಕೊಡುತ್ತಾರೆ ಎಂದಿದ್ದಾರೆ.

ಅವರ ಈ ಮಾತು ಸಂಚಲನ ಮೂಡಿಸಿದೆ. ಇಷ್ಟು ದಿನ ಏನೂ ಇಲ್ಲ ಎನ್ನುತ್ತಿದ್ದ ಡಿಕೆಶಿ ಈಗ ಎಲ್ಲವೂ ಸಿಎಂ ಹೇಳುತ್ತಾರೆ ಎನ್ನುವ ಮೂಲಕ ಸಿದ್ದು ಕಣಕ್ಕೆ ಚೆಂಡು ಎಸೆದು ಶಾಕ್ ಕೊಟ್ಟಿದ್ದಾರೆ. ಈ ಮೂಲಕ ಪರೋಕ್ಷವಾಗಿ ಒಪ್ಪಂದ ನಡೆದಿರುವುದು ನಿಜ ಎಂದು ಹೇಳಿದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ: ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಇದೇ 3ರಂದು ಗಲ್ಫ್‌ ರಾಷ್ಟ್ರಗಳ ಕಡೆ ವಿಮಾನ ಪ್ರಯಾಣ ಮಾಡಲಿರುವವರು ಈ ಸುದ್ದಿ ಓದಲೇ ಬೇಕು

ಮುಂದಿನ ಸುದ್ದಿ
Show comments