Webdunia - Bharat's app for daily news and videos

Install App

ಸಿಎಂ ಆಗಬೇಕೆಂದುಕೊಂಡಿರುವ ಡಿಕೆ ಶಿವಕುಮಾರ್ ಗೆ ಹಾಸನಾಂಬೆ ಕೊಟ್ಟ ಸೂಚನೆ ಏನು

Krishnaveni K
ಬುಧವಾರ, 15 ಅಕ್ಟೋಬರ್ 2025 (10:52 IST)
ಹಾಸನ: ಸಿಎಂ ಆಗಬೇಕೆಂದುಕೊಂಡಿರುವ ಡಿಕೆ ಶಿವಕುಮಾರ್ ಹಾಸನಾಂಬೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದು ಈ ವೇಳೆ ದೇವಿ ವಿಶೇಷ ಸೂಚನೆ ನೀಡಿದ್ದಾಳೆ.

ರಾಜ್ಯದಲ್ಲಿ ಈಗ ಸಿಎಂ ಬದಲಾವಣೆ ಮತ್ತು ಸಂಪುಟ ಪುನರಾಚನೆ ಕಸರತ್ತು ನಡೆಯುತ್ತಿರುವಾಗಲೇ ಹಾಸನಾಂಬೆಗೆ ಡಿಕೆ ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ವರ್ಷಕ್ಕೊಮ್ಮೆ ತೆರೆಯುವ ಹಾಸನಾಂಬೆ ದೇವಾಲಯಕ್ಕೆ ಪತ್ನಿ ಜೊತೆ ತೆರಳಿದ ಡಿಕೆ ಶಿವಕುಮಾರ್ ವಿಜಯೀ ಶ್ರೇಯಸ್ಸು ಸಿಗಲಿ ಎಂದು ನಾರಾಯಣಿ ನಮಸ್ಕಾರ ಮಂತ್ರದ ಪೂಜೆ ನಡೆಸಿದರು.

ಪೂಜೆ ವೇಳೆ ಡಿಕೆ ಶಿಗೆ ಶತ್ರುವಿನ ಮೇಲೆ ವಿಜಯ ಸಾಧಿಸುವ ಖಡ್ಗಮಾಲ ಸ್ತೋತ್ರ ಪಠಿಸಿದರು. ಈ ಪೂಜೆ ವೇಳೆ ದೇವಿಯ ಬಲಭಾಗದಿಂದ ಹೂ ಬಿದ್ದಿದೆ. ಇದು ಶುಭ ಸೂಚನೆಯಾಗಿದೆ.

ಪೂಜೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು ‘ಹಾಸನದ ಅಧಿದೇವತೆ ಹಾಗೂ ಶಕ್ತಿ ಪೀಠಗಳಲ್ಲಿ ಒಂದಾದ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಹಾಸನಾಂಬ ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದೆ. ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ತಾಯಿ ಹಾಸನಾಂಬೆ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವುದರ ಜೊತೆಗೆ ಹಲವು ಪವಾಡಗಳನ್ನು ಮಾಡುವ ಮೂಲಕ ಭಕ್ತರ ಹೃದಯಗಳಲ್ಲಿ ವಿಶೇಷ ಸ್ಥಾನ ಪಡೆದಿದ್ದಾಳೆ. ತಾಯಿ ಸನ್ನಿಧಿಯಲ್ಲಿ ನಾಡನ್ನು ಸಮೃದ್ಧವಾಗಿರಿಸು ಎಂದು  ಪ್ರಾರ್ಥನೆ ಸಲ್ಲಿಸಿದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಬಳ್ಳಾರಿ ಪಾದಯಾತ್ರೆ 2 ನೇ ದಿನ: ಸರ್ಕಾರ ರಾಜೀನಾಮೆ ಬಿಸಾಕಿ ಚುನಾವಣೆ ಎದುರಿಸಲಿ ಎಂದ ವಿಜಯೇಂದ್ರ

ಎಮ್ಮೆಗೂ ವಾಹನ ಯೋಗ… ಹಾಲು ಮಾರಲು ಎಮ್ಮೆಯನ್ನೇ ಬೈಕ್ ನಲ್ಲಿ ಕೂರಿಸಿಕೊಂಡ ಹೊರಟ ಮಾಲಿಕ Video

ತಮಿಳುನಾಡಿನ ದೇವಾಲಯಗಳಲ್ಲಿ ಮೊಬೈಲ್ ಬ್ಯಾನ್: ವಿಜಯ್ ಸರ್ಕಾರದ ಹೊಸ ನಿಯಮ ತಪ್ಪದೇ ಗಮನಿಸಿ

ವಿದೇಶಕ್ಕೆ ಹೋಗಿದ್ದ ಗಂಡ ಸರ್ಪೈಸ್ ಆಗಿ ಮನೆಗೆ ಬಂದರೆ ಹೆಂಡತಿ ಜೊತೆ ಬೇರೊಬ್ಬ… ಕೊನೆಗೆ ಮಾಡಿದ್ದೇನು Video

ಕಷ್ಟ ಎಂದರೇನು ಈ ಹುಡುಗಿ ನೋಡಿ… ಒಂಟಿ ಕಾಲಲ್ಲಿ ಡೊಂಕ ಹಾಕುತ್ತಾ ಶಾಲೆಗೆ ಹೋಗುವ ಹುಡುಗಿಯ ಕಣ್ಣೀರ ಕತೆ video

ಮುಂದಿನ ಸುದ್ದಿ
Show comments