Webdunia - Bharat's app for daily news and videos

Install App

ಸೋನಿಯಾ ಗಾಂಧಿ ಪ್ರಧಾನಿ ಪದವಿ ಬಿಟ್ಟ ತ್ಯಾಗಮಯಿ ಎಂದು ಸಿದ್ದರಾಮಯ್ಯಗೆ ಡಿಕೆ ಶಿವಕುಮಾರ್ ಟಾಂಗ್

Krishnaveni K
ಸೋಮವಾರ, 4 ಆಗಸ್ಟ್ 2025 (10:39 IST)
ಬೆಂಗಳೂರು: ಸೋನಿಯಾ ಗಾಂಧಿ ಪ್ರಧಾನಿ ಪದವಿ ಬಿಟ್ಟುಕೊಟ್ಟ ತ್ಯಾಗಮಯಿ ಎನ್ನುತ್ತಾ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಕುರ್ಚಿ ಬಿಡಲ್ಲ ಎನ್ನುತ್ತಿರುವ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟರಾ ಎಂಬ ಚರ್ಚೆ ಈಗ ರಾಜ್ಯ ರಾಜಕೀಯದಲ್ಲಿ ಶುರುವಾಗಿದೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಡಿಕೆ ಶಿವಕುಮಾರ್ ಪ್ರಧಾನಿ ಹುದ್ದೆ ಬೇಡ ಎಂದಿದ್ದ ಸೋನಿಯಾ ಗಾಂಧಿಯವರನ್ನು ಉಲ್ಲೇಖಿಸಿ ಹಾಡಿಹೊಗಳಿದ್ದಾರೆ. ಈ ಮೂಲಕ ತಮಗೆ ಸಿಎಂ ಸ್ಥಾನ ಬಿಟ್ಟುಕೊಡಲು ಒಪ್ಪದ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟರಾ ಎಂಬ ಅನುಮಾನ ಶುರುವಾಗಿದೆ.

ಡಿಕೆ ಶಿವಕುಮಾರ್ ಹೈಕಮಾಂಡ್ ಮುಂದೆಯೇ ಈ ಹೇಳಿಕೆ ನೀಡಿದ್ದು ವಿಶೇಷವಾಗಿದೆ. ಈ ಹಿಂದೆ ಸೋನಿಯಾ ಗಾಂಧಿಗೆ ಪ್ರಧಾನಿಯಾಗುವ ಅವಕಾಶವಿತ್ತು. ಆದರೆ ಸೋನಿಯಾ ಗಾಂದಿಯವರು ನನಗೆ ಅಧಿಕಾರ ಮುಖ್ಯವಲ್ಲ ಎಂದರು. ಆರ್ಥಿಕ ತಜ್ಞ ಪ್ರಧಾನಿಯಾದ್ರೆ ದೇಶ ಉಳಿಸಬಹುದು ಎಂದು ಮನಮೋಹನ್ ಸಿಂಗ್ ಅವರನ್ನು ಪ್ರಧಾನಿ ಮಾಡಿದ್ರು. ಇಂದು ಯಾರೂ ಅಷ್ಟು ಸುಲಭವಾಗಿ ತಮ್ಮ ಸ್ಥಾನ ಬಿಟ್ಟುಕೊಡಲ್ಲ. ಪಂಚಾಯತಿ ಸ್ಥಾನವಾದರೂ ಸರಿ, ತ್ಯಾಗ ಮಾಡಲು ಸಿದ್ಧರಿರಲ್ಲ. ಅಂತಹದ್ದರಲ್ಲಿ ಸೋನಿಯಾ ಪ್ರಧಾನಿ ಸ್ಥಾನವನ್ನೇ ತ್ಯಾಗ ಮಾಡಿದ್ದರು ಎಂದು ಹಾಡಿ ಹೊಗಳಿದ್ದಾರೆ.

ಒಂದೆಡೆ ಸೋನಿಯಾರನ್ನು ಹೊಗಳುವ ಮೂಲಕ ಡಿಕೆ ಶಿವಕುಮಾರ್ ಹೈಕಮಾಂಡ್ ಮುಂದೆಯೇ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರಹಾಕಿದರಾ ಎಂದು ಗುಸು ಗುಸು ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆ: ಹೈಕೋರ್ಟ್ ನಿಂದ ಮಹತ್ವದ ತೀರ್ಪು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಳಿಕೆ

ಬಿಪಿಎಲ್ ಕಾರ್ಡ್ ಅಕ್ರಮವಾಗಿ ಪಡೆದುಕೊಂಡವರಿಗೆ ಶಾಕ್ ಕೊಡಲು ಸಿದ್ಧವಾದ ಸರ್ಕಾರ

ರೇಣುಕಾಸ್ವಾಮಿ ಪತ್ನಿ ಸಹನಾಗೆ ಸರ್ಕಾರಿ ನೌಕರಿ, ಹಣ ಸಹಾಯ

ಮುಂದಿನ ಸುದ್ದಿ
Show comments