Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಪದೇ ಪದೇ ಸಿದ್ದರಾಮಯ್ಯನವರೇ ಮುಂದಿನ ಸಿಎಂ ಎಂದು ಬಹಿರಂಗ ಹೇಳಿಕೆ ಕೊಡುತ್ತಿರುವ ಶಾಸಕ ಜಮೀರ್ ಅಹಮ್ಮದ್ ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾರ್ನ್ ಮಾಡಿದ್ದಾರೆ.
ನಮ್ಮ ಡ್ಯೂಟಿ ಚೀಫ್ ಮಿನಿಸ್ಟರ್ ಆಗುವುದಲ್ಲ. ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಾಗಿದೆ. ಕಾಂಗ್ರೆಸ್ ಸಂಘಟಿತ ನಾಯಕತ್ವದಲ್ಲಿ ಚುನಾವಣೆ ಎದುರಿಸಲಿದೆ. ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ನನಗೂ ಅಭಿಮಾನಿಗಳಿದ್ದಾರೆ. ಆದರೆ ಯಾರೂ ಹದ್ದು ಮೀರಿ ಹೋಗಬಾರದು ಎಂದು ಡಿಕೆಶಿ ವಾರ್ನ್ ಮಾಡಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ನಾನು ಸಿಎಂ ಆಗಬೇಕೆಂಬುದು ಅವರ ವೈಯಕ್ತಿಕ ಹೇಳಿಕೆ. ಇದು ಪಕ್ಷದ ಅಭಿಪ್ರಾಯವಲ್ಲ ಎಂದು ಜಮೀರ್ ಪರವಾಗಿ ಮಾತನಾಡಿದ್ದಾರೆ.