Webdunia - Bharat's app for daily news and videos

Install App

ಸಿಎಂ ಕುರ್ಚಿಗಾಗಿ ಡಿಕೆ ಶಿವಕುಮಾರ್‌ ತೊಡೆ ತಟ್ಟಿ ನಿಂತಿದ್ದಾರೆ: ಬಿವೈ ವಿಜಯೇಂದ್ರ

Sampriya
ಗುರುವಾರ, 5 ಡಿಸೆಂಬರ್ 2024 (19:00 IST)
ಯಾದಗಿರಿ: ಸಿದ್ದರಾಮಯ್ಯ ಅವರು ಸಿಎಂ ಸ್ಥಾನ ತ್ಯಜಿಸಬೇಕೆಂದು ಡಿಕೆ ಶಿವಕುಮಾರ್ ಅವರು ಈಗಾಗಲೇ ಹೋರಾಟ ಆರಂಭಿಸಿದ್ದಾರೆ. ಮುಂಬರುವ ದಿನಗಳಲ್ಲಿ ಇದು ಯಾವ ಮಟ್ಟಕ್ಕೆ ಹೋಗುತ್ತದೆ ಎಂದು ಊಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭವಿಷ್ಯ ನುಡಿದರು.

ಯಾದಗಿರಿಯ ಶಹಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಕಾಂಗ್ರೆಸ್‌ನಲ್ಲಿ ಬಡಿಗೆ ಹಿಡಿದುಕೊಂಡು ಹೊಡೆದಾಡಿಕೊಳ್ಳುತ್ತಾರೆ. ಹಿರಿಯ ನಾಯಕರು ಒಳಗೊಂಡಂತೆ ಶಾಸಕರುಗಳು ಬಡಿಗೆ ತೆಗೆದುಕೊಂಡು ರಸ್ತೆಯಲ್ಲಿ ಹೊಡೆದಾಟಿಕೊಳ್ಳುತ್ತಾರೆ. ಅಂತಹ ಪರಿಸ್ಥಿತಿ ಈಗ ನಿರ್ಮಾಣವಾಗಿದೆ ಎಂದರು.

ಹಾಸನ ಕಾಂಗ್ರೆಸ್ ಸಮಾವೇಶದ  ಬಗ್ಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಸಮಾವೇಶ ಮಾಡುತ್ತಿದ್ದಾರೆ. ಡಿಕೆ ಶಿವಕುಮಾರ್ ಅವರನ್ನು ಬದಿಗಿಟ್ಟು ಶಕ್ತಿ ಪ್ರದರ್ಶನ ಮಾಡಲು ಹೊರಟಿದ್ದಾರೆ. ಡಿಕೆಶಿ ಅವರು ಕೋಟೆಗೆ ನುಗ್ಗಿ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಬರುವ ದಿನಗಳಲ್ಲಿ ಕಾಂಗ್ರೆಸ್‌ನಲ್ಲಿ ಯಾವ ರೀತಿ ಬದಲಾವಣೆ ಆಗುತ್ತದೆ ನೋಡಿ, ಸಿದ್ದರಾಮಯ್ಯ ಸಿಎಂ ಅವಧಿ ಮುಗಿದಿದೆ ಅಧಿಕಾರ ಬಿಟ್ಟು ಕೊಡಿ ಎಂದು ಡಿಕೆಶಿವಕುಮಾರ್ ತೊಡೆ ತಟ್ಟಿಕೊಂಡು ನಿಂತಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments