Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಈ ತಿಂಗಳಿನಲ್ಲಿ ತೀರ್ಥಯಾತ್ರೆ ಕೈಗೊಳ್ಳಲಿದ್ದಾರೆ.
ಮೇ 13,14, 15 ರಾಜಸ್ಥಾನದ ಉದಯಪುರದಲ್ಲಿ ಕಾಂಗ್ರೆಸ್ ಚಿಂತಕರ ಸಭೆಯನ್ನು ಆಯೋಜಿಸಲಾಗಿದೆ. ಈ ಸಭೆಯಲ್ಲಿ ಭಾಗಿಯಾಗಲಿರುವ ಡಿಕೆಶಿ ಕಾರ್ಯಕ್ರಮ ಮುಗಿದ ಬಳಿಕ ತೀರ್ಥಯಾತ್ರೆ ಕೈಗೊಳ್ಳಲಿದ್ದಾರೆ.
ಉತ್ತರಾಖಂಡದಲ್ಲಿರುವ ಪವಿತ್ರ ದೇವಸ್ಥಾನಗಳಾದ ಕೇದರಾನಾಥ, ಬದರೀನಾಥ, ಹರಿದ್ವಾರಕ್ಕೆ ಡಿಕೆ ಶಿವಕುಮಾರ್ ತೆರಳಲಿದ್ದಾರೆ. ಎರಡು ದಿನ ಪ್ರವಾಸ ಕೈಗೊಂಡ ಬಳಿಕ ಡಿಕೆಶಿ ಕರ್ನಾಟಕಕ್ಕೆ ಮರಳಲಿದ್ದಾರೆ.