Select Your Language

Notifications

webdunia
webdunia
webdunia
webdunia

ಗುರುವಾರ ಡಿಕೆಶಿ ದೆಹಲಿಗೆ : ಕಾವೇರಿ ನೀರು ಬಿಡುಗಡೆ ವಿಚಾರ

ಗುರುವಾರ ಡಿಕೆಶಿ ದೆಹಲಿಗೆ : ಕಾವೇರಿ ನೀರು ಬಿಡುಗಡೆ ವಿಚಾರ
ಬೆಂಗಳೂರು , ಗುರುವಾರ, 31 ಆಗಸ್ಟ್ 2023 (08:43 IST)
ಬೆಂಗಳೂರು : ಕಾವೇರಿ ನೀರು ಬಿಡುಗಡೆ ವಿಚಾರವಾಗಿ ಚರ್ಚೆ ನಡೆಸಲು ಗುರುವಾರ ದೆಹಲಿಗೆ ಹೋಗ್ತಿದ್ದೇನೆ ಅಂತಾ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
 
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ವಕೀಲರ ಭೇಟಿಗೆ ಹೋಗುತ್ತಿದ್ದೇನೆ. ಇಲಾಖೆ ಅಧಿಕಾರಿಗಳನ್ನು ಅಧಿಕೃತವಾಗಿ ಭೇಟಿ ಮಾಡಲಿದ್ದೇನೆ. ಅವರು 24ಟಿಎಂಸಿ ನೀರು ಕೇಳಿದ್ರು. ನಾವು 3 ಸಾವಿರ ಕ್ಯೂಸೆಕ್ ನೀರು ಬಿಡೋದಾಗಿ ಹೇಳಿದ್ವಿ. 5 ಸಾವಿರ ಕ್ಯೂಸೆಕ್ ಬಿಡುವಂತೆ ಹೇಳಿದ್ದಾರೆ. ನಾಳೆ ವಾಸ್ತವಾಂಶ ಬಗ್ಗೆ ಚರ್ಚೆ ಮಾಡುವುದಾಗಿ ಹೇಳಿದರು.

ನೀರು ಬಿಡುವ ವಿಚಾರದಲ್ಲಿ ಮಾಜಿ ಸಿಎಂ ಬೊಮ್ಮಾಯಿ ಆಕ್ಷೇಪದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಬೊಮ್ಮಾಯಿ ಅವರು ಏನು ಬೇಕಾದ್ರೂ ಸಲಹೆ ನೀಡಲಿ. ಲೆಕ್ಕಾಚಾರದ ಬೀಗ ನಮ್ಮ ಬಳಿ ಇದೆ. ಬೇರೆ ಯಾರಿಗೂ ಬೀಗ ಕೊಟ್ಟಿಲ್ಲ. ನಮ್ಮ ರೈತರ ಕಷ್ಟಕಾಲದಲ್ಲೂ ರಕ್ಷಣೆ ಮಾಡಬೇಕು.


Share this Story:

Follow Webdunia kannada

ಮುಂದಿನ ಸುದ್ದಿ

ಸೆಪ್ಟೆಂಬರ್ 23 & 24ರಂದು ಪಿಜಿ ಸಿಇಟಿ ಪರೀಕ್ಷೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ