Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ಅವಕಾಶ ಜನ ನಿಮಗೆ ಕೊಟ್ಟಿದ್ದಾರೆ ಕೆಲಸ ಮಾಡಿ. ಮಾಡಕ್ಕಾಗಿಲ್ಲ ಅಂದ್ರೆ ಚುನಾವಣೆಗೆ ಹೋಗೋಣ ಬನ್ನಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸವಾಲೆಸೆದಿದ್ದಾರೆ.
ಮಳೆ ಅವಾಂತರಕ್ಕೆ ಕಾಂಗ್ರೆಸ್ ಕಾಲದ ಒತ್ತುವರಿ ಕಾರಣ ಎಂಬ ಸಿಎಂ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಕಾಲದಲ್ಲಿ ಒತ್ತುವರಿ ಆಗಿದ್ರೆ ಇವರು ತೆರವು ಮಾಡಲಿ. ಇವರಿಗೆ ಆ ಕೆಲಸ ಮಾಡಕ್ಕಾಗದೇ ಮಾತಾಡ್ತಾರೆ.
ಕೊಟ್ಟ ಕುದುರೆ ಏರದವನು ವೀರನೂ ಅಲ್ಲ ಶೂರನೂ ಅಲ್ಲ. ಇವರಿಗೆ ಅಧಿಕಾರ ಕೊಟ್ಟಾಗ ಮಾಡಕ್ಕಾಗದೇ ಕಾಂಗ್ರೆಸ್ ನಿಂದ ಹಾಳಾಯ್ತು ಅಂತ ಹೇಳೋದಲ್ಲ ಎಂದು ವಾಗ್ದಾಳಿ ನಡೆಸಿದರು.