Publish Date: Tue, 03 Sep 2019 (11:40 IST)
Updated Date: Tue, 03 Sep 2019 (11:47 IST)
ಬೆಂಗಳೂರು : ಅಕ್ರಮ ಆಸ್ತಿ ಹೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೂಡ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ ಎನ್ನಲಾಗಿದೆ.
ನಿನ್ನೆ ಗಣೇಶ್ ಹಬ್ಬದಂದು ಕೂಡ ಡಿ.ಕೆ.ಶಿವಕುಮಾರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿದ್ದ ಹಿನ್ನಲೆಯಲ್ಲಿ ತಂದೆಯ ಕಾರ್ಯ ನಡೆಸಲಾಗಲಿಲ್ಲ ಎಂದು ಭಾವುಕರಾಗಿದ್ದ ಅವರು ಮೂರನೇ ದಿನವೂ ಇಡಿ. ಕಚೇರಿಗೆ ಹಾಜರಾಗಿ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ್ದಾರೆ.
ಮತ್ತೆ ಇಂದು ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಡಿಕೆಶಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.