Webdunia - Bharat's app for daily news and videos

Install App

ವಿಶ್ವ ಪರಿಸರ ದಿನಾಚರಣೆಯಂದೇ ಅರಣ್ಯಾಧಿಕಾರಿಗಳಿಗೆ ಡಿಕೆಶಿ ಕ್ಲಾಸ್

Webdunia
ಸೋಮವಾರ, 5 ಜೂನ್ 2023 (14:25 IST)
ಬೆಂಗಳೂರು : ಇಂದು ವಿಶ್ವ ಪರಿಸರ ದಿನಾಚರಣೆ ಯಾಗಿದ್ದು, ಈ ದಿನದಂದೇ ಅರಣ್ಯಾಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕ್ಲಾಸ್ ತೆಗೆದುಕೊಂಡಿದ್ದಾರೆ.
 
ಇಂದು ಬ್ಯಾಟರಾಯನಪುರ ವಿಧಾನ ಸಭಾ ಕ್ಷೇತ್ರದ ಥಣಿಸಂದ್ರ ರಾಚೇನಹಳ್ಳಿಗೆ ಕೆರೆ ಬಳಿ ಬಿಬಿಎಂಪಿಯಿಂದ ಗಿಡ ನೆಡುವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಪಾಲಿಕೆ ಅಧಿಕಾರಿಗಳು ಪಾರ್ಕ್ ಮಧ್ಯದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಇದರಿಂದ ಸಿಟ್ಟಿಗೆದ್ದ ಡಿಕೆಶಿ, ಬಿಬಿಎಂಪಿ ಮಹಿಳಾ ಅಧಿಕಾರಿಗೆ ಬೈದರು.

ಕಾಮನ್ ಸೆನ್ಸ್ ಇರಬೇಕು ಎಲ್ಲಿ ಗಿಡ ನಡಬೇಕು ಅಂತ ಹೇಳಿದರು. ಪಾರ್ಕ್ ನಲ್ಲಿ ಗಿಡ ನಡುವ ಕಾರ್ಯಕ್ರಮ ಮಾಡಿದ್ದಕ್ಕೆ ಡಿಕೆಶಿ ಬಳಿಕ ನಡೆದ ತಮ್ಮ ಭಾಷಣದಲ್ಲೂ ಅಸಮಧಾನ ವ್ಯಕ್ತಪಡಿಸಿದರು.  ಅರಣ್ಯ ಇಲಾಖೆಯವರು ನನ್ನ ಕೈಯಲ್ಲಿ ಪಾರ್ಕ್ ನಲ್ಲಿ ಗಿಡ ಹಾಕಿಸಿದ್ದಾರೆ. ಇದು ತಪ್ಪು, ಗಿಡವನ್ನು ಪಾರ್ಕ್ನಲ್ಲಿ ಹಾಕಿಸುವುದಲ್ಲ. ಅದರಲ್ಲೂ ನೀವು ಅರಣ್ಯ ಇಲಾಖೆಯವರು. ಪಾರ್ಕ್ ನಲ್ಲಿ ಚೆನ್ನಾಗಿರುವ ಜಾಗದಲ್ಲಿ ಗಿಡ ಹಾಕಿಸುವುದಲ್ಲ. ಪಾರ್ಕ್ ನಲ್ಲಿ ಖಾಲಿ ಇರುವ ಜಾಗದಲ್ಲಿ ಹಾಕಿಸಬೇಕಿತ್ತು. ಗಿಡ ಹಾಕಬೇಕಾದ್ರೆ ಯೋಚನೆ ಮಾಡಬೇಕು.

ಗಿಡಕ್ಕೆ ನನ್ನ ಹೆಸರು, ಕೃಷ್ಣ ಬೈರೇಗೌಡ ಅವರ ಹೆಸರು ಹಾಕಿದ್ದೀರಾ. ಗಿಡಗಳಿಗೆ ಏಕೆ ನಮ್ಮ ಹೆಸರು ಇಟ್ಟಿದ್ದೀರಿ. ನಾವು ಬಂದು ಗಿಡ ನೋಡ್ಕೊತ್ತೀವಾ?. ಅದರ ಬದಲಿಗೆ ಶಾಲಾ ಮಕ್ಕಳ ಹೆಸರು ಇಡಿ. ಪಾರ್ಕ್ಗಳಿಗಿಂತ ಹೆಚ್ಚಾಗಿ ರಸ್ತೆ ಸೇರಿದಂತೆ ಖಾಲಿ ಜಾಗದಲ್ಲಿ ಗಿಡ ಹಾಕಿ. ಮಕ್ಕಳು ಗಿಡಗಳನ್ನು ನೋಡಿಕೊಳ್ಳುತ್ತಾರೆ ಎಂದು ಹೇಳಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments