Publish Date: Mon, 15 Jun 2020 (17:02 IST)
Updated Date: Mon, 15 Jun 2020 (17:04 IST)
ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ ಡೆಡ್ಲಿ ಕೊರೊನಾ ತಗುಲುತ್ತಿದೆ.
ಈವರೆಗೆ 65 ಜನ ಪೊಲೀಸ್ ಸಿಬ್ಬಂದಿಗಳಿಗೆ ಕೋವಿಡ್ ಸೋಂಕು ತಲುಲಿದೆ. ಅದರಲ್ಲಿ ಸುಮಾರು 31 ಸಕ್ರಿಯ ಪ್ರಕರಣಗಳು ಇದ್ದು, ಉಳಿದವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೋಮ್ಮಾಯಿ ತಿಳಿಸಿದ್ದಾರೆ.
ವಿಶೇಷವಾಗಿ ಕೆಎಸ್ಆರ್ ಪಿ ಪೊಲೀಸ್ ಸಿಬ್ಬಂದಿಗಳು ನಿಪ್ಪಾಣಿ, ಪಾದರಾಯನಪುರ ಸೇರಿದಂತೆ ಅನೇಕ ಭಾಗಗಳಲ್ಲಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಸೋಂಕು ಹರಡುವ ಸಾಧ್ಯತೆ ಅಧಿಕವಾಗಿದ್ದು, ಅವರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲಾಗುವುದು.
ಕೊರೋನಾ ವಾರಿಯರ್ಸ್ ಮೇಲೆ ರಾಜ್ಯದಲ್ಲಿ ಯಾರೇ ದೌರ್ಜನ್ಯ ನಡೆಸಿದರೂ ಅವರ ಮೇಲೆ ಡಿಜಾಸ್ಟರ್ ಮ್ಯಾನೆಜ್ಮೆಂಟ್ ಆ್ಯಕ್ಟ್ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.